July 23, 2026
ಕ್ರೀಡಾ ಸುದ್ದಿತಾಲೂಕು ಸುದ್ದಿ

ಶಿಶಿರ್ ಜಯವಿಕ್ರಮ್ ಗೆ ವಾಲಿಬಾಲ್ ವಲಯದ “ಸರ್ವಾಂಗೀಣ ಆಟಗಾರ “ಪ್ರಶಸ್ತಿ

ಬೆಳ್ತಂಗಡಿ: ಮುಂಡಾಜೆ ವಿವೇಕಾನಂದ ವಿದ್ಯಾಸಂಸ್ಥೆ ಆತಿಥ್ಯದಲ್ಲಿ ಅ.10-11ರಂದು ನಡೆದ ಎಂಟು ಜಿಲ್ಲೆಯನ್ನು ಒಳಗೊಂಡ ಮೈಸೂರು ವಲಯ ಹದಿನಾಲ್ಕು ವರ್ಷ ಕೆಳಗಿನ ವಯೋಮಾನದ ವಾಲಿಬಾಲ್ ಪಂದ್ಯಾ ಕೂಟದಲ್ಲಿ ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿಯ ವಿದ್ಯಾರ್ಥಿ ಶಿಶಿರ್ ಜಯವಿಕ್ರಮ್ ಬೆಥನಿ ವಿದ್ಯಾಲಯ ಪುತ್ತೂರು ತಂಡದೊಂದಿಗೆ ಇತ್ತೀಚೆಗೆ ವಿಟ್ಲ ದಲ್ಲಿ ನಡೆದ ಜಿಲ್ಲಾ ಮಟ್ಟದ ಪಂದ್ಯಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ವಯಕ್ತಿಕವಾಗಿ ಉತ್ತಮ ಹೊಡೆತಗಾರ ಪ್ರಶಸ್ತಿ ಪಡೆದಿದ್ದು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ಮೈಸೂರು ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುವಯಕ್ತಿಕವಾಗಿ “ಉತ್ತಮ ಸರ್ವಾಂಗೀಣ ಆಟಗಾರ”ಪ್ರಶಸ್ತಿಯನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾನೆ.

ಈತ ಬೆಳ್ತಂಗಡಿ ತಾಲೂಕು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು ಹಾಗೂ ಸುಶ್ಮಿತಾ ದಂಪತಿಯ ಪುತ್ರನಾಗಿದ್ದು ಆತನಿಗೆ ಇಂದ್ರಪ್ರಸ್ಥ ವಿದ್ಯಾಲಯದ ದೈಹಿಕ ಶಿಕ್ಷಕರಾದ ಗೋಪಿನಾಥ್, ತರಬೇತುದಾರ ರಫೀಕ್ಹಾಗೂ ಬೆಥನಿ ವಿದ್ಯಾ ಸಂಸ್ಥೆಯ ಅಕ್ಷಯ್ ಮತ್ತು ನಿರಂಜನ್ ರಿಂದ ತರಬೇತಿಯನ್ನು ಪಡೆದಿರುತ್ತಾನೆ.

Related posts

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಬೆಳ್ತಂಗಡಿ ರಬ್ಬರ್ ಟ್ಯಾಪರ್ಸ್ ಮತ್ತು ಕೃಷಿ ಮಜ್ದೂರ್ ಸಂಘದ ಸಭೆ: ನೂತನ ಸಮಿತಿ ರಚನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಉರುವಾಲು :ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ವಿಟಿಯು ಮಂಗಳೂರು ವಲಯ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ ಎಸೋಸಿಯೇಷನ್ ಅಳದಂಗಡಿ ವಲಯದ ವಾರ್ಷಿಕ ಮಹಾಸಭೆ: ನೂತನ ಸಮಿತಿ ರಚನೆ

Suddi Udaya
error: Content is protected !!