22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆಚಿತ್ರ ವರದಿವರದಿ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ: ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ,ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ ಸುಮಂತ್ ಕುಮಾರ್‌ ಜೈನ್ ಅವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ

ಬಳಂಜ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ, ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ ಸುಮಂತ್ ಕುಮಾರ್‌ ಜೈನ್ ಅವರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಅಪಾರ ಸೇವೆಯನ್ನು ಪರಿಗಣಿಸಿ ಅ.12 ರಂದು ಶಿಕ್ಷಣ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಾಮಾಜಿಕ,ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾಜಕ್ಕೆ ವಿಶಿಷ್ಟ ಸೇವೆ ಸಲ್ಲಿಸಿದ ಸುಮಂತ್ ಕುಮಾರ್ ಮಾತನಾಡಿ ಅದೃಷ್ಟದ ಮೇಲೆ ಎಂದಿಗೂ ನಂಬಿಕೆ ಇಡಬೇಡಿ. ನಿಮ್ಮ ಕಠಿಣ ಶ್ರಮದ ಮೇಲೆ ನಂಬಿಕೆ ಇಡಿ, ಯಶಸ್ಸು ನಿಮ್ಮದಾಗುತ್ತದೆ.ನಮ್ಮ ಕಾಲೇಜಿನಲ್ಲಿ ಕಲಿತು ಹೋದ ಮಕ್ಕಳು ಇಂದು ದೇಶದ ಪ್ರತಿಷ್ಠಿತ ಕಂಪನಿಗಳಲ್ಲಿ,ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಂದುವರಿಸುತ್ತಿದ್ದಾರೆ. ನಮ್ಮ ಮಕ್ಕಳು ದೇಶಕ್ಕೆ ಆಸ್ತಿಯಾಗಬೇಕು. ಹೆತ್ತವರಿಗೆ ಒಳ್ಳೆಯ ಮಗನಾಗಬೇಕು. ಹಾಗಾಗಿ ನಮ್ಮಲ್ಲಿ ಸಂಸ್ಕಾರಭರಿತ ಮತ್ತು ಗುಣಮಟ್ಟದ ಶಿಕ್ಷಣ ನೀಡುತ್ತಿದ್ದೇವೆ ಎಂದರು.

ಇಂದಿನ ಯುವ ಸಮಾಜಕ್ಕೆ ನಮ್ಮ ಸಂಸ್ಕೃತಿ,ಆಚಾರ ವಿಚಾರದ ಬಗ್ಗೆ ತಿಳಿಯಪಡಿಸುವ ಉದ್ದೇಶದಿಂದ ಹಲವಾರು ವಿಶಿಷ್ಟ, ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಯಾಗಿದ್ದೇವೆ.ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಕಾರ್ಯಚಟುವಟಿಕೆಗಳು ಸಮಾಜಕ್ಕೆ ಮಾದರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ, ಕಾರ್ಯದರ್ಶಿ ರಂಜಿತ್ ಪೂಜಾರಿ,ನಿರ್ದೇಶಕರಾದ ಮನೋಹರ್ ಬಳಂಜ,ದಿನೇಶ್ ಪೂಜಾರಿ ಅಂತರ,ಯತೀಶ್ ವೈ ಎಲ್ ಬಳಂಜ, ಜಗದೀಶ್ ಪೂಜಾರಿ ಬಳ್ಳಿದಡ್ಡ,ಪ್ರವೀಣ್ ಡಿ ಕೋಟ್ಯಾನ್,ಯೋಗೀಶ್ ಕೊಂಗುಳ,ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶಾಸಕ ಹರೀಶ್ ಪೂಂಜರ ಅನುದಾನ:ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ರಸ್ತೆ ಡಾಂಬರೀಕರಣಕ್ಕೆ ಚಾಲನೆ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗತಂಬಿಲ ಸೇವೆ

Suddi Udaya

ಕೊಯ್ಯೂರು: ಸ.ಪ್ರೌ. ಶಾಲೆಯಲ್ಲಿ ಶಾಲಾ ಪಾರ್ಲಿಮೆಂಟ್ ಉದ್ಘಾಟನೆ

Suddi Udaya

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರಾಪ್ತಿ ಎಂ ಗೌಡರಿಗೆ ಸನ್ಮಾನ

Suddi Udaya

ಎನ್.ಎಮ್.ಎಮ್.ಎಸ್ ಪರೀಕ್ಷೆ: ಓಡಿಲ್ನಾಳ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಾದ ರಶ್ಮಿ ಹಾಗೂ ಸುಜನ್ ರಿಗೆ ಉತ್ತಮ ಅಂಕ : ರಾಜ್ಯಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya
error: Content is protected !!