37.9 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿತಾಲೂಕು ಸುದ್ದಿ

ಶಿಶಿರ್ ಜಯವಿಕ್ರಮ್ ಗೆ ವಾಲಿಬಾಲ್ ವಲಯದ “ಸರ್ವಾಂಗೀಣ ಆಟಗಾರ “ಪ್ರಶಸ್ತಿ

ಬೆಳ್ತಂಗಡಿ: ಮುಂಡಾಜೆ ವಿವೇಕಾನಂದ ವಿದ್ಯಾಸಂಸ್ಥೆ ಆತಿಥ್ಯದಲ್ಲಿ ಅ.10-11ರಂದು ನಡೆದ ಎಂಟು ಜಿಲ್ಲೆಯನ್ನು ಒಳಗೊಂಡ ಮೈಸೂರು ವಲಯ ಹದಿನಾಲ್ಕು ವರ್ಷ ಕೆಳಗಿನ ವಯೋಮಾನದ ವಾಲಿಬಾಲ್ ಪಂದ್ಯಾ ಕೂಟದಲ್ಲಿ ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿಯ ವಿದ್ಯಾರ್ಥಿ ಶಿಶಿರ್ ಜಯವಿಕ್ರಮ್ ಬೆಥನಿ ವಿದ್ಯಾಲಯ ಪುತ್ತೂರು ತಂಡದೊಂದಿಗೆ ಇತ್ತೀಚೆಗೆ ವಿಟ್ಲ ದಲ್ಲಿ ನಡೆದ ಜಿಲ್ಲಾ ಮಟ್ಟದ ಪಂದ್ಯಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ವಯಕ್ತಿಕವಾಗಿ ಉತ್ತಮ ಹೊಡೆತಗಾರ ಪ್ರಶಸ್ತಿ ಪಡೆದಿದ್ದು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ಮೈಸೂರು ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುವಯಕ್ತಿಕವಾಗಿ “ಉತ್ತಮ ಸರ್ವಾಂಗೀಣ ಆಟಗಾರ”ಪ್ರಶಸ್ತಿಯನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾನೆ.

ಈತ ಬೆಳ್ತಂಗಡಿ ತಾಲೂಕು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು ಹಾಗೂ ಸುಶ್ಮಿತಾ ದಂಪತಿಯ ಪುತ್ರನಾಗಿದ್ದು ಆತನಿಗೆ ಇಂದ್ರಪ್ರಸ್ಥ ವಿದ್ಯಾಲಯದ ದೈಹಿಕ ಶಿಕ್ಷಕರಾದ ಗೋಪಿನಾಥ್, ತರಬೇತುದಾರ ರಫೀಕ್ಹಾಗೂ ಬೆಥನಿ ವಿದ್ಯಾ ಸಂಸ್ಥೆಯ ಅಕ್ಷಯ್ ಮತ್ತು ನಿರಂಜನ್ ರಿಂದ ತರಬೇತಿಯನ್ನು ಪಡೆದಿರುತ್ತಾನೆ.

Related posts

ಮಚ್ಚಿನ: ಕುದ್ರಡ್ಕ ನಿವಾಸಿ ಅಣ್ಣಿ ಪೂಜಾರಿ ನಿಧನ

Suddi Udaya

ಮುಂಡಾಜೆ ದೇವಾಂಗ ಸಮಾಜ ಘಟಕದ ತ್ರೈಮಾಸಿಕ ಸಭೆ

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಆರಂಭ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಬಿಸಿ ಊಟಕ್ಕೆ ಚಾಲನೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಸಭೆ: ಅಕ್ರಮ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Suddi Udaya
error: Content is protected !!