July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ 666ನೇ ವಾತ್ಸಲ್ಯ ಮನೆ ಹಸ್ತಾಂತರ ಹಾಗೂ ಮಾಸಾಶನ ಜನಮಂಗಳ ಕಾರ್ಯಕ್ರಮ: ಪರೋಪಕಾರ ಮತ್ತು ಭಕ್ತಿಯ ಭಗವಂತನ ಆರಾಧನೆಯಿಂದ ಜೀವನ ಪಾವನ: ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರು

ಧರ್ಮಸ್ಥಳ: ಶ್ರೀ ಕ್ಷೇ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ 666ನೇ ವಾತ್ಸಲ್ಯ ಮನೆ ಹಸ್ತಾಂತರ ಹಾಗೂ ಮಾಸಾಶನ ಜನಮಂಗಳ ಕಾರ್ಯಕ್ರಮವು ಅಮೃತವರ್ಷಿಣಿ ಸಭಾಭವನದಲ್ಲಿ ಅ.12 ರಂದು ನಡೆಯಿತು.

ಶೃಂಗೇರಿ ಶ್ರೀ ಶಾರದಾ ಪೀಠಂ ದಕ್ಷಿಣಾಮ್ನಾಯ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರು ದಿವ್ಯ ಸಾನಿಧ್ಯ ವಹಿಸಿ ಪರೋಪಕಾರ ಮತ್ತು ಭಕ್ತಿಯ ಭಗವಂತನ ಆರಾಧನೆಯಿಂದ ಜೀವನ ಪಾವನ ಆಗುತ್ತದೆ ಎಂದು ಸ್ವಾಮೀಜಿ ಆಶೀರ್ವಚನ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿ 666 ವಾತ್ಸಲ್ಯ ಮನೆಗಳನ್ನು ಹಸ್ತಾಂತರಿಸಿದ್ದು, ಮುಂದೆ ಒಂದು ಸಾವಿರ ಮನೆಗಳನ್ನು ನೀಡುವ ಯೋಜನೆಯಿದೆ ಎಂದರು.ಎಸ್.ಕೆ.ಡಿ.ಆರ್.ಡಿ‌.ಪಿ ಚಾರ್ಟರ್ಡ್ ಅಕೌಂಟೆಂಟ್ ಹಾಗೂ ಟ್ರಸ್ಟಿಗಳಾದ ಶಾಮ್ ಭಟ್ ಕೆ,ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್, ಮಾತೃಶ್ರೀ ಹೇಮಾವತಿ ವೀ ಹೆಗ್ಗಡೆಯವರು,ಎಸ್.ಕೆ.ಡಿ.ಆರ್.ಡಿ‌.ಪಿ ಕಾರ್ಯನಿರ್ವಾಹಕ ನಿರ್ದೇಶಕರಾದ ಅನಿಲ್ ಕುಮಾರ್ ಎಸ್.ಎಸ್ ಉಪಸ್ಥಿತರಿದ್ದರು.

ನಿನಾದ ಕ್ಲಾಸಿಕಲ್ ತಂಡದಿಂದ ಪ್ರಾರ್ಥನೆ ನೇರವೇರಿತು.ಎಸ್.ಡಿ.ಎಂ ಉಪನ್ಯಾಸಕ ಶ್ರೀಧರ್ ಭಟ್ ಸ್ವಾಗತಿಸಿದರು.ಯೋಜನೆಯ ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್ ವಂದಿಸಿದರು. ಪೂಜಾ ಪ್ರಶಾಂತ್ ಶೆಟ್ಟಿ ನಿರೂಪಿಸಿದರು.

Related posts

ಲೋಕಸಭಾ ಚುನಾವಣೆ: ಬೆಳ್ತಂಗಡಿ ತಾಲೂಕಿನಲ್ಲಿ ಶೇ. 81.31 ಮತದಾನ

Suddi Udaya

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಘಟಕಗಳಿಗೆ ಭೇಟಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ ಸುವರ್ಣ ವರ್ಷಾಚರಣೆ; 50 ವಿಶಿಷ್ಟ ಕಾರ್ಯಕ್ರಮಗಳು, ಲಯನ್ಸ್ ಭವನ ನವೀಕರಣಕ್ಕೆ ನಿರ್ಧಾರ

Suddi Udaya

ಕಳೆದುಕೊಂಡಿದ್ದ ಚಿನ್ನವನ್ನು ಮರಳಿ ದಂಪತಿಗಳಿಗೆ ಹಸ್ತಾಂತರಿಸಿದ ಲಾಡ್ಜ್ ಮಾಲೀಕ

Suddi Udaya

ಬೆಳ್ತಂಗಡಿ ಟೀಂ ಅಭಯಹಸ್ತ ಆಯೋಜನಾ ಸಮಿತಿಯಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿಗಳ ವಿತರಣೆ

Suddi Udaya

ರಾಷ್ಟ್ರೀಯ ಯೋಗಾಸನ ಕ್ರೀಡಾ ಒಕ್ಕೂಟದ ಉಪಾಧ್ಯಕ್ಷರಾಗಿ ಡಾ. ಐ. ಶಶಿಕಾಂತ ಜೈನ್

Suddi Udaya
error: Content is protected !!