September 6, 2026
ಕ್ರೀಡಾ ಸುದ್ದಿತಾಲೂಕು ಸುದ್ದಿ

ಶಿಶಿರ್ ಜಯವಿಕ್ರಮ್ ಗೆ ವಾಲಿಬಾಲ್ ವಲಯದ “ಸರ್ವಾಂಗೀಣ ಆಟಗಾರ “ಪ್ರಶಸ್ತಿ

ಬೆಳ್ತಂಗಡಿ: ಮುಂಡಾಜೆ ವಿವೇಕಾನಂದ ವಿದ್ಯಾಸಂಸ್ಥೆ ಆತಿಥ್ಯದಲ್ಲಿ ಅ.10-11ರಂದು ನಡೆದ ಎಂಟು ಜಿಲ್ಲೆಯನ್ನು ಒಳಗೊಂಡ ಮೈಸೂರು ವಲಯ ಹದಿನಾಲ್ಕು ವರ್ಷ ಕೆಳಗಿನ ವಯೋಮಾನದ ವಾಲಿಬಾಲ್ ಪಂದ್ಯಾ ಕೂಟದಲ್ಲಿ ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿಯ ವಿದ್ಯಾರ್ಥಿ ಶಿಶಿರ್ ಜಯವಿಕ್ರಮ್ ಬೆಥನಿ ವಿದ್ಯಾಲಯ ಪುತ್ತೂರು ತಂಡದೊಂದಿಗೆ ಇತ್ತೀಚೆಗೆ ವಿಟ್ಲ ದಲ್ಲಿ ನಡೆದ ಜಿಲ್ಲಾ ಮಟ್ಟದ ಪಂದ್ಯಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ವಯಕ್ತಿಕವಾಗಿ ಉತ್ತಮ ಹೊಡೆತಗಾರ ಪ್ರಶಸ್ತಿ ಪಡೆದಿದ್ದು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ಮೈಸೂರು ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುವಯಕ್ತಿಕವಾಗಿ “ಉತ್ತಮ ಸರ್ವಾಂಗೀಣ ಆಟಗಾರ”ಪ್ರಶಸ್ತಿಯನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾನೆ.

ಈತ ಬೆಳ್ತಂಗಡಿ ತಾಲೂಕು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು ಹಾಗೂ ಸುಶ್ಮಿತಾ ದಂಪತಿಯ ಪುತ್ರನಾಗಿದ್ದು ಆತನಿಗೆ ಇಂದ್ರಪ್ರಸ್ಥ ವಿದ್ಯಾಲಯದ ದೈಹಿಕ ಶಿಕ್ಷಕರಾದ ಗೋಪಿನಾಥ್, ತರಬೇತುದಾರ ರಫೀಕ್ಹಾಗೂ ಬೆಥನಿ ವಿದ್ಯಾ ಸಂಸ್ಥೆಯ ಅಕ್ಷಯ್ ಮತ್ತು ನಿರಂಜನ್ ರಿಂದ ತರಬೇತಿಯನ್ನು ಪಡೆದಿರುತ್ತಾನೆ.

Related posts

ಶಕ್ತಿ ಯೋಜನೆಯ ಯಶಸ್ವಿಗಾಗಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya

ಉಜಿರೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಮೆರವಣಿಗೆ

Suddi Udaya

ಇಲಾಖಾಧಿಕಾರಿಗಳ ಗೈರು ಹಾಜರಾತಿಗೆ ಗ್ರಾಮಸ್ಥರು ಅಸಮಾಧಾನ- ಅಳದಂಗಡಿ ಗ್ರಾಮ ಸಭೆ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

Suddi Udaya

ಸೆ. 3: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ

Suddi Udaya

ಲಾರಿ-ಕಾರು ಮಧ್ಯೆ ಅಪಘಾತ: ಕಾರು ನಜ್ಜುಗುಜ್ಜು

Suddi Udaya
error: Content is protected !!