23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ 666ನೇ ವಾತ್ಸಲ್ಯ ಮನೆ ಹಸ್ತಾಂತರ ಹಾಗೂ ಮಾಸಾಶನ ಜನಮಂಗಳ ಕಾರ್ಯಕ್ರಮ: ಪರೋಪಕಾರ ಮತ್ತು ಭಕ್ತಿಯ ಭಗವಂತನ ಆರಾಧನೆಯಿಂದ ಜೀವನ ಪಾವನ: ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರು

ಧರ್ಮಸ್ಥಳ: ಶ್ರೀ ಕ್ಷೇ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ 666ನೇ ವಾತ್ಸಲ್ಯ ಮನೆ ಹಸ್ತಾಂತರ ಹಾಗೂ ಮಾಸಾಶನ ಜನಮಂಗಳ ಕಾರ್ಯಕ್ರಮವು ಅಮೃತವರ್ಷಿಣಿ ಸಭಾಭವನದಲ್ಲಿ ಅ.12 ರಂದು ನಡೆಯಿತು.

ಶೃಂಗೇರಿ ಶ್ರೀ ಶಾರದಾ ಪೀಠಂ ದಕ್ಷಿಣಾಮ್ನಾಯ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರು ದಿವ್ಯ ಸಾನಿಧ್ಯ ವಹಿಸಿ ಪರೋಪಕಾರ ಮತ್ತು ಭಕ್ತಿಯ ಭಗವಂತನ ಆರಾಧನೆಯಿಂದ ಜೀವನ ಪಾವನ ಆಗುತ್ತದೆ ಎಂದು ಸ್ವಾಮೀಜಿ ಆಶೀರ್ವಚನ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿ 666 ವಾತ್ಸಲ್ಯ ಮನೆಗಳನ್ನು ಹಸ್ತಾಂತರಿಸಿದ್ದು, ಮುಂದೆ ಒಂದು ಸಾವಿರ ಮನೆಗಳನ್ನು ನೀಡುವ ಯೋಜನೆಯಿದೆ ಎಂದರು.ಎಸ್.ಕೆ.ಡಿ.ಆರ್.ಡಿ‌.ಪಿ ಚಾರ್ಟರ್ಡ್ ಅಕೌಂಟೆಂಟ್ ಹಾಗೂ ಟ್ರಸ್ಟಿಗಳಾದ ಶಾಮ್ ಭಟ್ ಕೆ,ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್, ಮಾತೃಶ್ರೀ ಹೇಮಾವತಿ ವೀ ಹೆಗ್ಗಡೆಯವರು,ಎಸ್.ಕೆ.ಡಿ.ಆರ್.ಡಿ‌.ಪಿ ಕಾರ್ಯನಿರ್ವಾಹಕ ನಿರ್ದೇಶಕರಾದ ಅನಿಲ್ ಕುಮಾರ್ ಎಸ್.ಎಸ್ ಉಪಸ್ಥಿತರಿದ್ದರು.

ನಿನಾದ ಕ್ಲಾಸಿಕಲ್ ತಂಡದಿಂದ ಪ್ರಾರ್ಥನೆ ನೇರವೇರಿತು.ಎಸ್.ಡಿ.ಎಂ ಉಪನ್ಯಾಸಕ ಶ್ರೀಧರ್ ಭಟ್ ಸ್ವಾಗತಿಸಿದರು.ಯೋಜನೆಯ ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್ ವಂದಿಸಿದರು. ಪೂಜಾ ಪ್ರಶಾಂತ್ ಶೆಟ್ಟಿ ನಿರೂಪಿಸಿದರು.

Related posts

ಕುವೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕಲ್ಮಂಜ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Suddi Udaya

ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ದೊಂಡೋಲೆ ನಾರ್ಯ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಸತೀಶ್, ಕಾರ್ಯದರ್ಶಿ ದಿವಾಕರ್

Suddi Udaya

ಅಶ್ರಫ್ ಆಲಿಕುಂಞಿ (ಅಚ್ಚು) ಮುಂಡಾಜೆ ಅವರಿಗೆ ಲಯನ್ಸ್ ಜಿಲ್ಲಾ “ಗೋಲ್ಡನ್ ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್” ಪುರಸ್ಕಾರ

Suddi Udaya

ಧರ್ಮಸ್ಥಳ: ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಮತ್ತು ವ್ಯಸನಮುಕ್ತರ ಕುಟುಂಬೋತ್ಸವ ಕಾರ್ಯಕ್ರಮ

Suddi Udaya
error: Content is protected !!