July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮ ಮದ್ಯ ಮಾರಾಟಕ್ಕೆ ಯತ್ನ: ಧರ್ಮಸ್ಥಳ ಪೊಲೀಸರಿಂದ ದಾಳಿ ಆರೋಪಿಯ ಬಂಧನ

ಬೆಳ್ತಂಗಡಿ : ನಿಡ್ಲೆ ಗ್ರಾಮದ ಕುದ್ರಾಯ ಬಸ್ ನಿಲ್ದಾಣದ ಅಂಗಡಿ ಬಳಿ ಅಕ್ರಮವಾಗಿ ಮಧ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ ಮದ್ಯ ಸಮೇತ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಧರ್ಮಸ್ಥಳ-ನಿಡ್ಲೆ ಗ್ರಾಮದ ಬೀಟ್‌ ಸಿಬ್ಬಂದಿ ಸೆ.12 ರಂದು ಶೇಖರ ಗೌಡ ರವರು ಪಿಎಸ್ಐ ಗೆ ದೂರವಾಣಿ ಕರೆ ಮಾಡಿ ನಿಡ್ಲೆ ಗ್ರಾಮದ ಕುದ್ರಾಯ ಬಸ್ಸು ತಂಗುದಾಣದ ಅಂಗಡಿ ಬಳಿ ಶಾಂತಪ್ಪ ಎಂಬಾತನು ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮದ್ಯವನ್ನು ಶೇಖರಿಸಿಟ್ಟು ವ್ಯಾಪಾರ ಮಾಡಲು ಪ್ರಯತ್ನಿಸುತ್ತಿರುವುದಾಗಿ ಭಾತ್ಮಿದಾರರಿಂದ ಖಚಿತ ಮಾಹಿತಿ ಬಂದಿರುವುದಾಗಿ ತಿಳಿಸಿದಂತೆ ಮಾಹಿತಿಯನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ಧರ್ಮಸ್ಥಳ ಪ್ರಭಾರ ಪಿಎಸ್ಐ ಸಿಕಂಧರ್ ಪಾಷಾ ಸಿಬ್ಬಂದಿಗಳೊಂದಿಗೆ ಇಲಾಖಾ ವಾಹನದಲ್ಲಿ ಠಾಣೆಯಿಂದ ಕುದ್ರಾಯ ಬಳಿ ನಿಂತುಕೊಂಡಿದ್ದ ಇಬ್ಬರನ್ನು ಪಂಚರನ್ನಾಗಿ ಕರೆದುಕೊಂಡು 2 ಗಂಟೆಗೆ ಪಂಚರೊಂದಿಗೆ ಅಲ್ಲಿಯೇ ಹತ್ತಿರದಲ್ಲಿದ್ದ ಅಂಗಡಿಯ ಬಳಿ ಹೋಗಿ ಸಿಬ್ಬಂದಿಯವರ ಜೊತೆಯಲ್ಲಿ ಅಂಗಡಿಯ ಒಳಗೆ ಹಾಗೂ ಅಂಗಡಿಯ ಹೊರಗೆ ಹುಡುಕಾಡಿದ ಸಮಯ ಅಂಗಡಿಯ ಹೊರಗಡೆ ಹಿಂಬದಿಯಲ್ಲಿ ಗೋಣಿ ಚೀಲದ ಕಟ್ಟೊಂದು ಇದ್ದು, ಅದರ ಸಮೀಪ ಒಬ್ಬ ವ್ಯಕ್ತಿ ನಿಂತುಕೊಂಡಿದ್ದ ಸಾಂತಪ್ಪ ಎಂಬಾತನನ್ನು ವಶಕ್ಕೆ ಪಡೆದು ಸ್ಥಳದಲ್ಲಿ ಶೋಧನಾ ಕಾರ್ಯ ನಡೆಸಲು ಮಾನ್ಯ ನ್ಯಾಯಾಲಯದಿಂದ ಸಮುಚಿತ ಆದೇಶ ಪಡೆಯಲು ಕಾಲವಕಾಶ ಇಲ್ಲದ ಕಾರಣ ಕರ್ನಾಟಕ ಅಬಕಾರಿ ಕಾಯಿದೆ ಅಧಿನಿಯಮ 1965 ರ 54 ಪ್ರಕರಣಾಧೀನ ಬರೆದ ಶೋಧನಾ ಸರ್ಚ್‌ ವಾರಂಟ್‌ ಗೆ ಪಂಚರ ಸಹಿ ಪಡೆದ ಬಳಿಕ ಆರೋಪಿಯನ್ನು ಕೂಲಂಕುಷವಾಗಿ ವಿಚಾರಣೆ ನಡೆಸಿದಾಗ ಅಕ್ರಮ ಮದ್ಯ ಮಾರಾಟ ಮಾಡುವುದನ್ನು ಬಾಯಿಬಿಟ್ಟಿದ್ದಾನೆ. ಬಳಿಕ ಪ್ಲಾಸ್ಟಿಕ್ ಗೋಣಿ ಚೀಲದಲ್ಲಿ ಮದ್ಯದ ಸ್ಯಾಚೆಟ್‌ ಗಳು ಇರುವುದಾಗಿ ತಿಳಿಸಿದ್ದು, ಪಂಚರ ಸಮಕ್ಷಮದಲ್ಲಿ ಆರೋಪಿತನ ಅಂಗ ಜಪ್ತಿ ಮಾಡಿ ಬಳಿಕ ಪ್ಲಾಸ್ಟಿಕ್ ಗೋಣಿ ಕೈ ಚೀಲವನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ 90 ML MYSORE LANCER Whisky ಎಂಬ ಹೆಸರಿರುವ ಒಟ್ಟು 36 ಸ್ಯಾಚೆಟ್‌ಗಳಲ್ಲಿ ಒಟ್ಟು 3.240 ಲೀಟರ್‌ ಮದ್ಯವಿದ್ದು ಇದರ ಅಂದಾಜು ಮೌಲ್ಯ ರೂ 1800/- ಆಗಬಹುದು. ಆರೋಪಿಯು ಯಾವುದೇ ಪರವಾನಿಗೆ ಅಥವಾ ಸಂಬಂಧಿಸಿದ ಪ್ರಾಧಿಕಾರದಿಂದ ಅನುಮತಿ ಪಡೆಯದೇ ಮದ್ಯ ತುಂಬಿದ ಸ್ಯಾಚೆಟ್‌ಗಳನ್ನು ಆತನ ವಶದಲ್ಲಿಟ್ಟು ಸಾರ್ವಜನಿಕರಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದುದರಿಂದ ಆರೋಪಿ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕ ಪಂಚಮಿ ಪಾದೆ ಮನೆಯ ಶಾಂತಪ್ಪ (51) ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related posts

ಸ್ವರ್ಣ ಜೇಸಿ ಸಪ್ತಾಹ: ಗೋಲ್ಡನ್ ಜೆಸಿಐ ಡ್ಯಾನ್ಸಿಂಗ್ ಸ್ಟಾರ್ ಸ್ಪರ್ಧೆಯಲ್ಲಿ ರಿತ್ವಿಕ್ ಕೆ. ಪಿ ಬೆಳ್ತಂಗಡಿ ಪ್ರಥಮ ಸ್ಥಾನ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’, ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’23 ಸಮಾರೋಪ

Suddi Udaya

ಬೆಳ್ತಂಗಡಿ ರತ್ನತ್ರಯ ತೀರ್ಥಕ್ಷೇತ್ರದಲ್ಲಿಶ್ರವಣಬೆಳಗೊಳದ ಪೂಜ್ಯ ಚಾರುಕೀರ್ತಿ ಭಟ್ಟಾರಕರ ದಿವ್ಯ ಉಪಸ್ಥಿತಿಯಲ್ಲಿ ಚಂದನ ಷಷ್ಠಿ ನೋಂಪಿ ಉದ್ಯಾಪನೆ

Suddi Udaya

ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಗ್ರಾಮ ಸಂಗ್ರಾಮ್

Suddi Udaya

ತಾಲೂಕು ಪ್ರೌಢಶಾಲಾ ಕಬಡ್ಡಿ ಬೆಳಾಲು ಎಸ್ ಡಿ ಎಂ ಶಾಲಾ ತಂಡ ಪ್ರಥಮ

Suddi Udaya
error: Content is protected !!