23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋದ್ಯೆ ಶ್ರವಣಧಾಮಕ್ಕೆ ಭೇಟಿ

ಬೆಳ್ತಂಗಡಿ: ಉತ್ತರ ಭಾರತದ ಪ್ರವಾಸದಲ್ಲಿರುವ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶ ಮಹಾ ಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅ. 12ರಂದು ಅಯೋದ್ಯೆ ಶ್ರವಣಧಾಮಕ್ಕೆ ಭೇಟಿ ನೀಡಿದರು.

ರಾಮಾಯಣ ಕಾಲದ ಶ್ರವಣ ಕುಮಾರನ ಚರಿತ್ರೆಯಲ್ಲಿ ಕುರುಡರಾದ ವೃದ್ಧ ತಂದೆ ತಾಯಿಯನ್ನು ತಕ್ಕಡಿಯಲ್ಲಿ ಕೂರಿಸಿ ತನ್ನ ಭುಜದ ಮೇಲೆ ಹೊತ್ತುಕೊಂಡು ಅಯೋಧ್ಯೆಯಿಂದ ಸುಮಾರು ಐವತ್ತು ಕಿಲೋಮೀಟರ್ ದೂರದ ಒಂದು ಜಾಗದಲ್ಲಿ ಕುಳ್ಳಿರಿಸಿ ಅವರಿಗೆ ಬಾಯಾರಿಕೆಗಾಗಿ ನೀರು ತರಲು ಹೋದ ಸಂದರ್ಭದಲ್ಲಿ ನೀರು ಬಿಂದಿಗೆಗೆ ತುಂಬಿಸುವ ಶಬ್ದ ಬಂದಾಗ ಜಿಂಕೆ ಒಂದು ನೀರು ಕುಡಿಯಲು ಬಂದಿದೆ ಎಂದು ತಿಳಿದ ಚಕ್ರವರ್ತಿ ಮಹಾರಾಜ ದಶರಥನು ಶಬ್ದವೇದಿ ಬಾಣ ಪ್ರಯೋಗಿಸಿದಾಗ ಶ್ರವಣ ಕುಮಾರನ ಹತ್ಯೆಯಾಗುತ್ತದೆ. ಶ್ರವಣಕುಮಾರನ ತಂದೆ ತಾಯಿಗಳು ದಶರಥ ಮಹಾರಾಜರಿಗೆ ಶಾಪ ಕೊಟ್ಟಂತ ಸ್ಥಳ ಇಂದು ಶ್ರವಣಧಾಮ ಎಂಬ ಹೆಸರಿನಿಂದ ಬಹುದೊಡ್ಡ ಪುಣ್ಯಕ್ಷೇತ್ರವಾಗಿದೆ. ಈ ಕ್ಷೇತ್ರಕ್ಕೆ ತಮ್ಮ ಶಿಷ್ಯ ಪರಿವಾರದೊಂದಿಗೆ ಹೋಗಿ, ಕ್ಷೇತ್ರ ದರ್ಶನ ಮಾಡಿದರು.

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ವೇಣೂರು ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಕೊಕ್ಕಡ : ನಿವೃತ್ತ ಅಂಚೆ ಪಾಲಕ  ಬಾಲಕೃಷ್ಣ ನಿಧನ

Suddi Udaya

ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

ಗೇರುಕಟ್ಚೆ ಮುಖ್ಯ ರಸ್ತೆಯಲ್ಲಿ ಕೃತಕ ನೆರೆ

Suddi Udaya

ಪ್ರಯಾಗ್ ರಾಜ್‌ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನಗೈದ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಶಶಿಧರ ಶೆಟ್ಟಿ

Suddi Udaya
error: Content is protected !!