23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋದ್ಯೆ ಶ್ರವಣಧಾಮಕ್ಕೆ ಭೇಟಿ

ಬೆಳ್ತಂಗಡಿ: ಉತ್ತರ ಭಾರತದ ಪ್ರವಾಸದಲ್ಲಿರುವ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶ ಮಹಾ ಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅ. 12ರಂದು ಅಯೋದ್ಯೆ ಶ್ರವಣಧಾಮಕ್ಕೆ ಭೇಟಿ ನೀಡಿದರು.

ರಾಮಾಯಣ ಕಾಲದ ಶ್ರವಣ ಕುಮಾರನ ಚರಿತ್ರೆಯಲ್ಲಿ ಕುರುಡರಾದ ವೃದ್ಧ ತಂದೆ ತಾಯಿಯನ್ನು ತಕ್ಕಡಿಯಲ್ಲಿ ಕೂರಿಸಿ ತನ್ನ ಭುಜದ ಮೇಲೆ ಹೊತ್ತುಕೊಂಡು ಅಯೋಧ್ಯೆಯಿಂದ ಸುಮಾರು ಐವತ್ತು ಕಿಲೋಮೀಟರ್ ದೂರದ ಒಂದು ಜಾಗದಲ್ಲಿ ಕುಳ್ಳಿರಿಸಿ ಅವರಿಗೆ ಬಾಯಾರಿಕೆಗಾಗಿ ನೀರು ತರಲು ಹೋದ ಸಂದರ್ಭದಲ್ಲಿ ನೀರು ಬಿಂದಿಗೆಗೆ ತುಂಬಿಸುವ ಶಬ್ದ ಬಂದಾಗ ಜಿಂಕೆ ಒಂದು ನೀರು ಕುಡಿಯಲು ಬಂದಿದೆ ಎಂದು ತಿಳಿದ ಚಕ್ರವರ್ತಿ ಮಹಾರಾಜ ದಶರಥನು ಶಬ್ದವೇದಿ ಬಾಣ ಪ್ರಯೋಗಿಸಿದಾಗ ಶ್ರವಣ ಕುಮಾರನ ಹತ್ಯೆಯಾಗುತ್ತದೆ. ಶ್ರವಣಕುಮಾರನ ತಂದೆ ತಾಯಿಗಳು ದಶರಥ ಮಹಾರಾಜರಿಗೆ ಶಾಪ ಕೊಟ್ಟಂತ ಸ್ಥಳ ಇಂದು ಶ್ರವಣಧಾಮ ಎಂಬ ಹೆಸರಿನಿಂದ ಬಹುದೊಡ್ಡ ಪುಣ್ಯಕ್ಷೇತ್ರವಾಗಿದೆ. ಈ ಕ್ಷೇತ್ರಕ್ಕೆ ತಮ್ಮ ಶಿಷ್ಯ ಪರಿವಾರದೊಂದಿಗೆ ಹೋಗಿ, ಕ್ಷೇತ್ರ ದರ್ಶನ ಮಾಡಿದರು.

Related posts

ಕುವೆಟ್ಟು : ಪಯ್ಯೊಟ್ಟು ನಿವಾಸಿ ಸೀತಾರಾಮ ಪೂಜಾರಿ ನಿಧನ

Suddi Udaya

ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆ: ಶಿಹಾನ್ ಅಬ್ದುಲ್ ರೆಹಮಾನ್ ರವರ ನೇತೃತ್ವದ ಉಜಿರೆ ಹಾಗೂ ಬೆಳ್ತಂಗಡಿ ಕರಾಟೆ ತರಬೇತಿ ಕೇಂದ್ರದ ಮಕ್ಕಳಿಗೆ ಹಲವು ಪ್ರಶಸ್ತಿ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಕಾಂಗ್ರೆಸ್ ಕರಪತ್ರದಲ್ಲಿ ಯಕ್ಷಗಾನ ವೇಷಧಾರಿಯ ಫೋಟೋ ಬಳಕೆ: ಜಿಲ್ಲಾ ಚುನಾವಣಾಧಿಕಾರಿಗೆ ದೂರು ದಾಖಲು

Suddi Udaya

ಬಾರ್ಯ: ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ರಚನೆಗೆ ಶ್ರೀ ಕ್ಷೇ.ಧ. ಗ್ರಾ ಯೋಜನೆಯಿಂದ ದೇಣಿಗೆ ಹಸ್ತಾಂತರ

Suddi Udaya
error: Content is protected !!