July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು : ಮಲೆಕುಡಿಯರ ಸಂಘ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನೂತನ ಭಜನಾ ಮಂದಿರ ನಿರ್ಮಾಣದ ಸಮಿತಿ ರಚನೆ

ಬೆಳ್ತಂಗಡಿ : ನಮ್ಮ ಹಿರಿಯರು ಆರಾಧಿಸಿಕೊಂಡು ಬಂದಿರುವ ಶಿವಪಾರ್ವತಿಯ ಭಜನಾ ಮಂದಿರವನ್ನು ಎಲ್ಲರೂ ಸೇರಿ ಉತ್ತಮ ರೀತಿಯಲ್ಲಿ ನಿರ್ಮಿಸೋಣ. ಭಜನಾ ಮಂದಿರ ನಿರ್ಮಾಣದ ಜೊತೆಗೆ ಸಮುದಾಯ ಭವನವೂ ಅಭಿವೃದ್ಧಿ ಹೊಂದುವಂತಾಗಲಿ ಎಂದು ಮಲೆಕುಡಿಯರ ಸಂಘ ದ.ಕ. ಜಿಲ್ಲಾ ಸಮಿತಿಯ ಅಧ್ಯಕ್ಷ ಹರೀಶ್ ಎಳನೀರು ಹೇಳಿದರು.

ಅವರು ಅ.12 ರಂದು ಬೆಳ್ತಂಗಡಿ ತಾ. ಕೊಯ್ಯೂರು ಶಿವಗಿರಿಯಲ್ಲಿರುವ ಮಲೆಕುಡಿಯರ ಸಮುದಾಯ ಭವನದಲ್ಲಿ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನೂತನ ಭಜನಾ ಮಂದಿರ ನಿರ್ಮಾಣದ ಸಮಿತಿಯನ್ನು ರಚನೆ ಮಾಡಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು.


ಮಲೆಕುಡಿಯ ಸಮುದಾಯಕ್ಕೆ ಮಲೈಕುಡಿ, ಕುಡಿಯ ಮುಂತಾದ ಜಾತಿ ಪ್ರಮಾಣಪತ್ರಗಳ ಬದಲಾಗಿ ಮಲೆಕುಡಿಯ ಎಂಬ ಏಕರೂಪ ಜಾತಿಪ್ರಮಾಣ ಪತ್ರ ನೀಡುವ ಬಗ್ಗೆ ಸರಕಾರಕ್ಕೆ ಮನವಿ ಸಲ್ಲಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು. ಹಾಗೆಯೇ ಪೌಷ್ಠಿಕ ಆಹಾರ, ವಿದ್ಯುತ್ ಸಮಸ್ಯೆಗಳ ಪರಿಹಾರದ ಬಗ್ಗೆ ಪ್ರಸ್ತಾಪ ಮಾಡಿದರು.
ಶಿವಪಾರ್ವತಿ ಭಜನಾ ಮಂದಿರ ನಿರ್ಮಾಣ ಸಮಿತಿಯ ಗೌರವಾಧ್ಯಕ್ಷರಾಗಿ ಜಿ.ಕೆ. ನಾರಾಯಣ ಧರ್ಮಸ್ಥಳ, ಅಧ್ಯಕ್ಷರಾಗಿ ಪರಮೇಶ್ವರ ಉಜಿರೆ, ಉಪಾಧ್ಯಕ್ಷರಾಗಿ ಶ್ರೀನಿವಾಸ ಉಜಿರೆ ಪ್ರಧಾನ ಕಾರ್ಯದರ್ಶಿಯಾಗಿ ದೇವಪ್ಪ ಎಂ.ಕೆ. ಕನ್ಯಾಡಿ, ಜೊತೆ ಕಾರ್ಯದರ್ಶಿಯಾಗಿ ರಾಮಣ್ಣ ಪಂಡಿಂಜೆ, ಖಜಾಂಚಿಯಾಗಿ ಕೃಷ್ಣಪ್ಪ ಕಾಶಿಬೆಟ್ಟು, ಸಂಘಟನಾ ಕಾರ್ಯದರ್ಶಿಗಳಾಗಿ ನೋಣಯ್ಯ ಮಂಗಳೂರು, ಶಿವರಾಮ ಉಜಿರೆ ಗೌರವ ಸಲಹೆಗಾರರಾಗಿ ಸಂಜೀವ ಕುಲ್ಲಾಜೆ ಕೊಯ್ಯೂರು, ವಸಂತಿ ನೆಲ್ಲಿಕಾರು, ವಾರಿಜ ಉಜಿರೆ, ಬಾಲಕೃಷ್ಣ ಕೆ. ಪೊಳಲಿ, ಜಯರಾಮ ಆಲಂಗಾರು, ಮಹಾಬಲ ಮಲೆಕುಡಿಯ ಸವಣಾಲು, ಹಾಗೂ ಸದಸ್ಯರುಗಳಾಗಿ ಜಯಪ್ರಕಾಶ್ ಎನ್, ಪುತ್ತೂರು, ರಾಮ ಕಿಲಾರಿಪಾಡಿ ಪುತ್ತೂರು, ಜಯಾನಂದ ಪಿಲಿಕಲ ಇವರನ್ನು ಆಯ್ಕೆ ಮಾಡಲಾಯಿತು. ಹಾಗೆಯೇ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಈ ಸಮಿತಿಯೊಂದಿಗೆ ಕೈ ಜೋಡಿಸಲಿದ್ದಾರೆ. ಭಜನಾ ಮಂದಿರ ನಿರ್ಮಾಣ ಸಮಿತಿಯ ಹೆಸರಿನಲ್ಲಿ ಬ್ಯಾಂಕ್ ಖಾತೆ ತೆರೆಯಲಾಗುವುದು ಎಂದು ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲಾಯಿತು.


ಸಮುದಾಯದ ಅಭಿವೃದ್ಧಿಗಳ ಬಗ್ಗೆ ಶ್ರೀನಿವಾಸ ಉಜಿರೆ, ದೇವಪ್ಪ ಎಂ.ಕೆ. ಕನ್ಯಾಡಿ, ಜಯಪ್ರಕಾಶ್ ಪುತ್ತೂರು, ಜಯರಾಮ ಆಲಂಗಾರು ಸಭೆಯನ್ನು ಉದ್ದೇಶಿಸಿ ಅಭಿಪ್ರಾಯಗಳನ್ನು ಮಂಡಿಸಿದರು.
ವೇದಿಕೆಯಲ್ಲಿ ಮಲೆಕುಡಿಯ ಸಂಘದ ರಾಜ್ಯ ಸಮಿತಿ ಉಪಾಧ್ಯಕ್ಷೆ ವಸಂತಿ ನೆಲ್ಲಿಕಾರು, ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಕೆ. ಪೊಳಲಿ, ಪರಮೇಶ್ವರ ಉಜಿರೆ, ಜಿಲ್ಲಾ ಸಮಿತಿ ಮಾಜಿ ಅಧ್ಯಕ್ಷ ಸಂಜೀವ ಕುಲ್ಲಾಜೆ ಉಪಸ್ಥಿತರಿದ್ದರು.
ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯೇಂದ್ರ ಎಂ. ನಿಡ್ಲೆ ಕಾರ್ಯಕ್ರಮ ನಿರೂಪಿಸಿದರು. ಸಂಘಟನಾ ಕಾರ್ಯದರ್ಶಿ ಯುವರಾಜ್ ವೇಣೂರು ಸ್ವಾಗತಿಸಿ, ಕೋಶಾಧಿಕಾರಿ ಕೃಷ್ಣ ಪೂರ್ಜೆ ವರದಿ ವಾಚಿಸಿದರು.

Related posts

ಬೆಳ್ತಂಗಡಿ: ಡಾ| ಬಿ. ಆರ್. ಅಂಬೇಡ್ಕರ್ ರವರ 135 ನೇ ಜನ್ಮದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತರಗತಿ ಕೊಠಡಿಗಳ ಸೂಚನಾ ಫಲಕದ ನಾವಿನ್ಯತೆ ಕಾರ್ಯಾಗಾರ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಯುವಸಿರಿ- ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ ಸುಮಾರು 500ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಗದ್ದೆಯಲ್ಲಿ ನೇಜಿನಾಟಿ

Suddi Udaya

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಜು.21: ಲಾಲಿತ್ಯೋದ್ಯಾನ ಕವನ ಸಂಕಲನ ಬಿಡುಗಡೆ

Suddi Udaya

ಅಳದಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಪೋಷಕರ ಸಭೆ

Suddi Udaya
error: Content is protected !!