July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಾ. ರೋಹನ್ ದೀಕ್ಷಿತ್ ರೋಟರೀ ಕ್ಲಬ್ ಸದಸ್ಯರಾಗಿ ಪದಗ್ರಹಣ

ಉಜಿರೆ ಎಸ್.ಡಿ.ಎಮ್ ಆಸ್ಪತ್ರೆಯಲ್ಲಿ ಇಎನ್ ಟಿ ಸರ್ಜನ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಡಾ. ರೋಹನ್ ದೀಕ್ಷಿತ್ ರವರು ಅ.12 ರಂದು ರೋಟರಿ ಕ್ಲಬ್ ಬೆಳ್ತಂಗಡಿಯ ಸದಸ್ಯರಾಗಿ ಸೇರಿದರು.

ಮುಂದಿನ ವರ್ಷದ ಅಸಿಸ್ಟೆಂಟ್ ಗವರ್ನರ್ ರೋ. ಡಾ. ಶಶಿಧರ್ ಡೋಂಗ್ರೆಯವರು ಈ ಪದಗ್ರಹಣ ಕಾರ್ಯಕ್ರಮ ನಿರ್ವಹಿಸಿ ಶುಭ ಹಾರೈಸಿದರು.
ಕೋಶಾಧಿಕಾರಿ ರೋ| ನಾರಾಯಣ ಪೈಯವರು, ತಮ್ಮ ಜನ್ಮ ದಿನದ ಪ್ರಯುಕ್ತ ಏರ್ಪಡಿಸಿದ್ದ ಭವ್ಯ ಕುಟುಂಬ ಸಮ್ಮಿಲನ ಕಾರ್ಯಕ್ರಮದ ಪ್ರಾರಂಭದಲ್ಲಿ, ಆ್ಯನ್ ಗೀತಾ ಪ್ರಕಾಶ ಪ್ರಭುರವರು ಪ್ರಾರ್ಥನೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ರೋ. ಪ್ರೊ.ಪ್ರಕಾಶ ಪ್ರಭುಗಳು ಸ್ವಾಗತಿಸಿದರು. ಎಸ್.ಡಿ.ಎಂ ಆಸ್ಪತ್ರೆಯ ಚೀಫ್ ಮೆಡಿಕಲ್ ಆಫೀಸರ್ ಡಾ ಸಾತ್ವಿಕರವರು ಡಾ.ರೋಹನ ದೀಕ್ಷಿತರನ್ನು ಸಭೆಗೆ ಪರಿಚಯಿಸಿದರು. ಡಾ.ರೋಹನ್ ರವರು ತಮಗೆ ಇಂತಹ ಅಂತರಾಷ್ಟ್ರೀಯ ಸೇವಾ ಸಂಸ್ಥೆಯ ಸದಸ್ಯತ್ವವನ್ನು ನೀಡಿದುದಕ್ಕಾಗಿ ಧನ್ಯವಾದ ಸಲ್ಲಿಸಿದರು.

ಡಾ. ಎಂ.ಎಂ ದಯಾಕರರು ಧನ್ಯವಾದವಿತ್ತರು. ರೋಟರಿ ಹಿರಿಯ ಸದಸ್ಯರಾದ ಪುಂಡಲೀಕ ಭಟ್, ಡಾ. ನಿಖಿತ, ರೋಟರೀ ಸದಸ್ಯರು, ಆ್ಯನ್ಸ್ ಗಳು, ಆ್ಯನೆಟ್ಗಳು ಭಾಗವಹಿಸಿದರು.

ಡಾ. ಅಂಕಿತಾ ಭಟ್, ಗೀತಾ ಪ್ರಭು,ಲಿಲ್ಲಿ ಆ್ಯಂಟೋನಿ,ಸುಜಾತ ಅಣ್ಣಿ ಪೂಜಾರಿ, ವೀಣಾ ಮಯ್ಯ, ಡಾ ಶ್ರೀಹರಿ ಮತ್ತು ಪ್ರೊ. ಪ್ರಕಾಶ ಪ್ರಭು ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು.

Related posts

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ಸಿ.ಕೆ ರೋಹಿನಿ ನೇಮಕ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ” ಪೃಥ್ವಿ ಮಹಾಪರ್ವ”

Suddi Udaya

ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಚಂದ್ರಿಕಾ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಈಶ್ವರ ದೇವರ ನೂತನ ಗರ್ಭಗೃಹದ ಶಿಲಾನ್ಯಾಸ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಸಿದ್ಧಿಶ್ರೀ ಸಭಾಭವನಕ್ಕೆ ಸಹಾಯಧನ ಚೆಕ್ ಹಸ್ತಾಂತರ

Suddi Udaya

ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya
error: Content is protected !!