25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಸಮಾರೋಪ 

ಬೆಳ್ತಂಗಡಿ : ಜಿಲ್ಲಾಡಳಿತ ಮತ್ತು ಜಿಪಂ ದಕ, ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಹಾಗೂ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ವತಿಯಿಂದ ಮುಂಡಾಜೆ ಅನುದಾನಿತ ಪ್ರೌಢಶಾಲೆಯ ವಿವೇಕಾನಂದ ಕ್ರೀಡಾಂಗಣದಲ್ಲಿ ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ ಅ.11ರಂದು ಜರಗಿತು.

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಿನಯಚಂದ್ರ ವಹಿಸಿದ್ದರು. ಆರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ, ಎಕ್ಸೆಲ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್,ಯಂಗ್ ಚಾಲೆಂಜರ್ಸ್ ಸ್ಪೋರ್ಟ್ಸ್ ಕ್ಲಬ್ ನ ಸಂಚಾಲಕ ನಾಮದೇವ ರಾವ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.

8 ಜಿಲ್ಲೆಗಳಿಂದ ಒಟ್ಟು 32 ತಂಡಗಳ 600 ಕ್ರೀಡಾಪಟುಗಳು ಭಾಗವಹಿಸಿದ್ದರು. 17 ರ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಹಾಸನ ಜಿಲ್ಲೆಯ ಅರಕಲಗೂಡು ಸರಕಾರಿ ಪ್ರೌಢಶಾಲೆ ಬಾಲಕಿಯರ ತಂಡ, 17ರ ವಯೋಮಾನದ ಬಾಲಕರ ವಿಭಾಗದ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಹಾಸನ ಜಿಲ್ಲೆಯ ಮಂಗಳೂರು ಪಬ್ಲಿಕ್ ಸ್ಕೂಲ್ ನ ಬಾಲಕರ ತಂಡ, 14 ರ ವಯೋಮಾನದ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ದಕ ಜಿಲ್ಲೆಯ ಪುತ್ತೂರಿನ ಬಾಲಕರ ತಂಡ,14 ರ ವಯೋಮಾನದ ಬಾಲಕಿಯರ ವಿಭಾಗದ ಪಂದ್ಯಾಟದಲ್ಲಿ  ಹಾಸನ ಜಿಲ್ಲೆಯ ಅರಕಲಗೂಡಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿಕೊಂಡಿದೆ.

Related posts

ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಜೇಮ್ಸ್ ಪಟ್ಟೇರಿಲ್ ರವರಿಗೆ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದಿಂದ ಗೌರವಾರ್ಪಣೆ

Suddi Udaya

ಕೊಕ್ಕಡದ ರಿತ್ವಿಕಾ ನವೋದಯ ವಿದ್ಯಾಲಯಕ್ಕೆ ಆಯ್ಕೆ

Suddi Udaya

ಭಾರತ್ ಬೀಡಿ ಕಂಪೆನಿ ಉಳಿಸಿ ಭಾರತ್ ಬೀಡಿ ಕಂಪೆನಿ ಎದುರು ಸಿಐಟಿಯು ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಶ್ರೀ ದುರ್ಗೆ, ಶ್ರೀ ಗಣಪತಿ, ಶ್ರೀಶಾಸ್ತಾ ದೇವರ, ನಾಗದೇವರ, ಅಭಯನಂದಿ ಹಾಗೂ ದೈವಗಳ ಪ್ರತಿಷ್ಠೆ

Suddi Udaya
error: Content is protected !!