September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮ ಮದ್ಯ ಮಾರಾಟಕ್ಕೆ ಯತ್ನ: ಧರ್ಮಸ್ಥಳ ಪೊಲೀಸರಿಂದ ದಾಳಿ ಆರೋಪಿಯ ಬಂಧನ

ಬೆಳ್ತಂಗಡಿ : ನಿಡ್ಲೆ ಗ್ರಾಮದ ಕುದ್ರಾಯ ಬಸ್ ನಿಲ್ದಾಣದ ಅಂಗಡಿ ಬಳಿ ಅಕ್ರಮವಾಗಿ ಮಧ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ ಮದ್ಯ ಸಮೇತ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಧರ್ಮಸ್ಥಳ-ನಿಡ್ಲೆ ಗ್ರಾಮದ ಬೀಟ್‌ ಸಿಬ್ಬಂದಿ ಸೆ.12 ರಂದು ಶೇಖರ ಗೌಡ ರವರು ಪಿಎಸ್ಐ ಗೆ ದೂರವಾಣಿ ಕರೆ ಮಾಡಿ ನಿಡ್ಲೆ ಗ್ರಾಮದ ಕುದ್ರಾಯ ಬಸ್ಸು ತಂಗುದಾಣದ ಅಂಗಡಿ ಬಳಿ ಶಾಂತಪ್ಪ ಎಂಬಾತನು ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮದ್ಯವನ್ನು ಶೇಖರಿಸಿಟ್ಟು ವ್ಯಾಪಾರ ಮಾಡಲು ಪ್ರಯತ್ನಿಸುತ್ತಿರುವುದಾಗಿ ಭಾತ್ಮಿದಾರರಿಂದ ಖಚಿತ ಮಾಹಿತಿ ಬಂದಿರುವುದಾಗಿ ತಿಳಿಸಿದಂತೆ ಮಾಹಿತಿಯನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ಧರ್ಮಸ್ಥಳ ಪ್ರಭಾರ ಪಿಎಸ್ಐ ಸಿಕಂಧರ್ ಪಾಷಾ ಸಿಬ್ಬಂದಿಗಳೊಂದಿಗೆ ಇಲಾಖಾ ವಾಹನದಲ್ಲಿ ಠಾಣೆಯಿಂದ ಕುದ್ರಾಯ ಬಳಿ ನಿಂತುಕೊಂಡಿದ್ದ ಇಬ್ಬರನ್ನು ಪಂಚರನ್ನಾಗಿ ಕರೆದುಕೊಂಡು 2 ಗಂಟೆಗೆ ಪಂಚರೊಂದಿಗೆ ಅಲ್ಲಿಯೇ ಹತ್ತಿರದಲ್ಲಿದ್ದ ಅಂಗಡಿಯ ಬಳಿ ಹೋಗಿ ಸಿಬ್ಬಂದಿಯವರ ಜೊತೆಯಲ್ಲಿ ಅಂಗಡಿಯ ಒಳಗೆ ಹಾಗೂ ಅಂಗಡಿಯ ಹೊರಗೆ ಹುಡುಕಾಡಿದ ಸಮಯ ಅಂಗಡಿಯ ಹೊರಗಡೆ ಹಿಂಬದಿಯಲ್ಲಿ ಗೋಣಿ ಚೀಲದ ಕಟ್ಟೊಂದು ಇದ್ದು, ಅದರ ಸಮೀಪ ಒಬ್ಬ ವ್ಯಕ್ತಿ ನಿಂತುಕೊಂಡಿದ್ದ ಸಾಂತಪ್ಪ ಎಂಬಾತನನ್ನು ವಶಕ್ಕೆ ಪಡೆದು ಸ್ಥಳದಲ್ಲಿ ಶೋಧನಾ ಕಾರ್ಯ ನಡೆಸಲು ಮಾನ್ಯ ನ್ಯಾಯಾಲಯದಿಂದ ಸಮುಚಿತ ಆದೇಶ ಪಡೆಯಲು ಕಾಲವಕಾಶ ಇಲ್ಲದ ಕಾರಣ ಕರ್ನಾಟಕ ಅಬಕಾರಿ ಕಾಯಿದೆ ಅಧಿನಿಯಮ 1965 ರ 54 ಪ್ರಕರಣಾಧೀನ ಬರೆದ ಶೋಧನಾ ಸರ್ಚ್‌ ವಾರಂಟ್‌ ಗೆ ಪಂಚರ ಸಹಿ ಪಡೆದ ಬಳಿಕ ಆರೋಪಿಯನ್ನು ಕೂಲಂಕುಷವಾಗಿ ವಿಚಾರಣೆ ನಡೆಸಿದಾಗ ಅಕ್ರಮ ಮದ್ಯ ಮಾರಾಟ ಮಾಡುವುದನ್ನು ಬಾಯಿಬಿಟ್ಟಿದ್ದಾನೆ. ಬಳಿಕ ಪ್ಲಾಸ್ಟಿಕ್ ಗೋಣಿ ಚೀಲದಲ್ಲಿ ಮದ್ಯದ ಸ್ಯಾಚೆಟ್‌ ಗಳು ಇರುವುದಾಗಿ ತಿಳಿಸಿದ್ದು, ಪಂಚರ ಸಮಕ್ಷಮದಲ್ಲಿ ಆರೋಪಿತನ ಅಂಗ ಜಪ್ತಿ ಮಾಡಿ ಬಳಿಕ ಪ್ಲಾಸ್ಟಿಕ್ ಗೋಣಿ ಕೈ ಚೀಲವನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ 90 ML MYSORE LANCER Whisky ಎಂಬ ಹೆಸರಿರುವ ಒಟ್ಟು 36 ಸ್ಯಾಚೆಟ್‌ಗಳಲ್ಲಿ ಒಟ್ಟು 3.240 ಲೀಟರ್‌ ಮದ್ಯವಿದ್ದು ಇದರ ಅಂದಾಜು ಮೌಲ್ಯ ರೂ 1800/- ಆಗಬಹುದು. ಆರೋಪಿಯು ಯಾವುದೇ ಪರವಾನಿಗೆ ಅಥವಾ ಸಂಬಂಧಿಸಿದ ಪ್ರಾಧಿಕಾರದಿಂದ ಅನುಮತಿ ಪಡೆಯದೇ ಮದ್ಯ ತುಂಬಿದ ಸ್ಯಾಚೆಟ್‌ಗಳನ್ನು ಆತನ ವಶದಲ್ಲಿಟ್ಟು ಸಾರ್ವಜನಿಕರಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದುದರಿಂದ ಆರೋಪಿ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕ ಪಂಚಮಿ ಪಾದೆ ಮನೆಯ ಶಾಂತಪ್ಪ (51) ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related posts

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ

Suddi Udaya

ನ.3: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ “ಬಂಟೆರೆ ತುಡರ್ ಪರ್ಬ”

Suddi Udaya

ಮಾಲಾಡಿ: ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಆರೋಗ್ಯ ಮಾಹಿತಿ

Suddi Udaya

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

Suddi Udaya

ನಿಕಟ ಪೂರ್ವ ರಾಜಾಧ್ಯಕ್ಷರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿಯ ಶ್ರೀ ರಾಮಸ್ವಾಮಿ(ವಿಸಿಎನ್ಆರ್ ಗ್ರೂಪ್) ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಕೊಯ್ಯೂರು: ಕೋರಿಯಾರು ವಾತ್ಸಲ್ಯ ಮನೆಯ ಗೋಪಾಲಕೃಷ್ಣ ಶರ್ಮ ನಿಧನ

Suddi Udaya
error: Content is protected !!