37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಸೈಬರ್ ಭದ್ರತೆ ಕುರಿತು ಉಪನ್ಯಾಸ

ಉಜಿರೆ : ಎಸ್.ಡಿ.ಎಂ ಪಾಲಿಟೆಕ್ನಿಕ್‌ನ ಕಂಪ್ಯೂಟರ್ ಸೈನ್ಸ್ ವಿಭಾಗವು 2025ರ ಅ. 11 ರಂದು “ಸೈಬರ್ ಭದ್ರತೆ” ಬಗ್ಗೆ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ಉಜಿರೆ) ಎಲೆಕ್ಟ್ರಾನಿಕ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಮೋಹನ್ ನಾಯ್ಕ್ ಆರ್ ಅವರು ಮಾತನಾಡಿದರು.

ಅವರು ಇಂದಿನ ಡಿಜಿಟಲ್ ಜಗತ್ತಿನಲ್ಲಿ ಸೈಬರ್ ಭದ್ರತೆ ಎಷ್ಟು ಮುಖ್ಯ ಎಂಬುದನ್ನು ತಿಳಿಸಿದರು. ಬೇರೆ ಬೇರೆ ರೀತಿಯ ಸೈಬರ್ ಅಪಾಯಗಳು (Cyber Threats). ಮಾಹಿತಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳುವ ಉತ್ತಮ ಮಾರ್ಗಗಳು (Data Protection Strategies). ಆನ್‌ಲೈನ್‌ನಲ್ಲಿ ಸುರಕ್ಷಿತವಾಗಿ ಇರಲು ನಾವು ಅನುಸರಿಸಬೇಕಾದ ಉತ್ತಮ ನಡೆಗಳು (Ethical Practices).
ವಿದ್ಯಾರ್ಥಿಗಳು ಸೈಬರ್ ಅಪಾಯಗಳಿಂದ ತಮ್ಮನ್ನು ಹೇಗೆ ರಕ್ಷಿಸಿಕೊಳ್ಳಬಹುದು ಎಂಬುದರ ಬಗ್ಗೆ ಉಪಯುಕ್ತ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಪಾಲಿಟೆಕ್ನಿಕ್‌ನ ಪ್ರಾಂಶುಪಾಲರಾದ ಸಂತೋಷ್, ವ್ಯವಸ್ಥಾಪಕರಾದ ಚಂದ್ರನಾಥ್ ಜೈನ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ದಿನೇಶ್ ಉಪಸ್ಥಿತರಿದ್ದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕಿ ಶ್ರೀಮತಿ ರೇನೀಟಾ ಫೆರ್ನಾಂಡಿಸ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಅಳದಂಗಡಿ: ಹಿಂದೂ ಹೃದಯ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಕ್ಸೆಲ್ ನಲ್ಲಿ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ರಾಜ್ಯೋತ್ಸವ ಆಚರಣೆ ಎಕ್ಸೆಲ್ ವಿದ್ಯಾಸಂಸ್ಥೆ ಸದಾ ಕನ್ನಡದ ಸೇವೆಗೆ ಸಿದ್ಧ: ಸುಮಂತ್ ಕುಮಾರ್ ಜೈನ್

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಉತ್ಸವ: 500 ವೆರೈಟಿಯ ಕರಿಮಣಿ ಉತ್ಸವ ಇನ್ನೂ ಕೇವಲ 6 ದಿನ ಬಾಕಿ

Suddi Udaya

ಲಾಯಿಲ: ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಎಸ್ಟೇಟ್ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ: ಶೀಘ್ರವೇ ಸಮಸ್ಯೆ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ

Suddi Udaya

ಮೊಗ್ರು ಊoತನಾಜೆ ಲಕ್ಷ್ಮೀ ನಾರಾಯಣ ಭಜನಾ ಮಂದಿರದಲ್ಲಿ ಕಣಿಯೂರು ವಲಯ ಮೊಗ್ರು ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಭಾರೀ ಮಳೆ ಹಿನ್ನೆಲೆ: ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜೂ16)ರಜೆ ಘೋಷಣೆ

Suddi Udaya
error: Content is protected !!