23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಸೈಬರ್ ಭದ್ರತೆ ಕುರಿತು ಉಪನ್ಯಾಸ

ಉಜಿರೆ : ಎಸ್.ಡಿ.ಎಂ ಪಾಲಿಟೆಕ್ನಿಕ್‌ನ ಕಂಪ್ಯೂಟರ್ ಸೈನ್ಸ್ ವಿಭಾಗವು 2025ರ ಅ. 11 ರಂದು “ಸೈಬರ್ ಭದ್ರತೆ” ಬಗ್ಗೆ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ಉಜಿರೆ) ಎಲೆಕ್ಟ್ರಾನಿಕ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಮೋಹನ್ ನಾಯ್ಕ್ ಆರ್ ಅವರು ಮಾತನಾಡಿದರು.

ಅವರು ಇಂದಿನ ಡಿಜಿಟಲ್ ಜಗತ್ತಿನಲ್ಲಿ ಸೈಬರ್ ಭದ್ರತೆ ಎಷ್ಟು ಮುಖ್ಯ ಎಂಬುದನ್ನು ತಿಳಿಸಿದರು. ಬೇರೆ ಬೇರೆ ರೀತಿಯ ಸೈಬರ್ ಅಪಾಯಗಳು (Cyber Threats). ಮಾಹಿತಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳುವ ಉತ್ತಮ ಮಾರ್ಗಗಳು (Data Protection Strategies). ಆನ್‌ಲೈನ್‌ನಲ್ಲಿ ಸುರಕ್ಷಿತವಾಗಿ ಇರಲು ನಾವು ಅನುಸರಿಸಬೇಕಾದ ಉತ್ತಮ ನಡೆಗಳು (Ethical Practices).
ವಿದ್ಯಾರ್ಥಿಗಳು ಸೈಬರ್ ಅಪಾಯಗಳಿಂದ ತಮ್ಮನ್ನು ಹೇಗೆ ರಕ್ಷಿಸಿಕೊಳ್ಳಬಹುದು ಎಂಬುದರ ಬಗ್ಗೆ ಉಪಯುಕ್ತ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಪಾಲಿಟೆಕ್ನಿಕ್‌ನ ಪ್ರಾಂಶುಪಾಲರಾದ ಸಂತೋಷ್, ವ್ಯವಸ್ಥಾಪಕರಾದ ಚಂದ್ರನಾಥ್ ಜೈನ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ದಿನೇಶ್ ಉಪಸ್ಥಿತರಿದ್ದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕಿ ಶ್ರೀಮತಿ ರೇನೀಟಾ ಫೆರ್ನಾಂಡಿಸ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಎಸ್ ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪ್ರಸಕ್ತ ವರ್ಷ ರೂ.5 ಕೋಟಿಗೂ ಅಧಿಕ ಮೊತ್ತದ ಉಚಿತ ಡಯಾಲಿಸಿಸ್ ಸೇವೆ, ಉಚಿತ ಜೌಷಧ ಹಾಗೂ ಚಿಕಿತ್ಸೆ: ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಅಪಾಯಕಾರಿ ಸ್ಥಳಗಳಿರುವ ಮನೆಗಳಿಗೆ ಮೇಲಂತಬೆಟ್ಟು ಗ್ರಾಮ ಪಂಚಾಯತಿನಿಂದ ಮತ್ತೊಮ್ಮೆ ನೋಟೀಸು

Suddi Udaya

ನೆರಿಯದಲ್ಲಿ ಅಟಲ್ ವಿರಾಸತ್ ಜನ್ಮ ಶತಾಬ್ದಿ ಪ್ರಯುಕ್ತ ಕಿರಣ್ ಚಂದ್ರ ಡಿ. ಪುಷ್ಪಗಿರಿಯವರಿಂದ ಕಿಟ್ ವಿತರಣೆ

Suddi Udaya

ಜು.23: ದೆಹಲಿಯಲ್ಲಿ ಬಿಎಮ್ಎಸ್ ಇದರ 70ನೇ ವರ್ಷದ ಕಾರ್ಯಕ್ರಮಗಳ ಸಮಾರೋಪ : ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಸಭಾಭಾವನದಲ್ಲಿ ನೇರಪ್ರಸಾರ

Suddi Udaya

ಕಡಿರುದ್ಯಾವರ: ಕೆ. ಎನ್. ಭಟ್ ಶಿರಾಡಿಪಾಲ್ ಜನ್ಮ ಶತಮಾನೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!