23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋದ್ಯೆ ಶ್ರವಣಧಾಮಕ್ಕೆ ಭೇಟಿ

ಬೆಳ್ತಂಗಡಿ: ಉತ್ತರ ಭಾರತದ ಪ್ರವಾಸದಲ್ಲಿರುವ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶ ಮಹಾ ಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅ. 12ರಂದು ಅಯೋದ್ಯೆ ಶ್ರವಣಧಾಮಕ್ಕೆ ಭೇಟಿ ನೀಡಿದರು.

ರಾಮಾಯಣ ಕಾಲದ ಶ್ರವಣ ಕುಮಾರನ ಚರಿತ್ರೆಯಲ್ಲಿ ಕುರುಡರಾದ ವೃದ್ಧ ತಂದೆ ತಾಯಿಯನ್ನು ತಕ್ಕಡಿಯಲ್ಲಿ ಕೂರಿಸಿ ತನ್ನ ಭುಜದ ಮೇಲೆ ಹೊತ್ತುಕೊಂಡು ಅಯೋಧ್ಯೆಯಿಂದ ಸುಮಾರು ಐವತ್ತು ಕಿಲೋಮೀಟರ್ ದೂರದ ಒಂದು ಜಾಗದಲ್ಲಿ ಕುಳ್ಳಿರಿಸಿ ಅವರಿಗೆ ಬಾಯಾರಿಕೆಗಾಗಿ ನೀರು ತರಲು ಹೋದ ಸಂದರ್ಭದಲ್ಲಿ ನೀರು ಬಿಂದಿಗೆಗೆ ತುಂಬಿಸುವ ಶಬ್ದ ಬಂದಾಗ ಜಿಂಕೆ ಒಂದು ನೀರು ಕುಡಿಯಲು ಬಂದಿದೆ ಎಂದು ತಿಳಿದ ಚಕ್ರವರ್ತಿ ಮಹಾರಾಜ ದಶರಥನು ಶಬ್ದವೇದಿ ಬಾಣ ಪ್ರಯೋಗಿಸಿದಾಗ ಶ್ರವಣ ಕುಮಾರನ ಹತ್ಯೆಯಾಗುತ್ತದೆ. ಶ್ರವಣಕುಮಾರನ ತಂದೆ ತಾಯಿಗಳು ದಶರಥ ಮಹಾರಾಜರಿಗೆ ಶಾಪ ಕೊಟ್ಟಂತ ಸ್ಥಳ ಇಂದು ಶ್ರವಣಧಾಮ ಎಂಬ ಹೆಸರಿನಿಂದ ಬಹುದೊಡ್ಡ ಪುಣ್ಯಕ್ಷೇತ್ರವಾಗಿದೆ. ಈ ಕ್ಷೇತ್ರಕ್ಕೆ ತಮ್ಮ ಶಿಷ್ಯ ಪರಿವಾರದೊಂದಿಗೆ ಹೋಗಿ, ಕ್ಷೇತ್ರ ದರ್ಶನ ಮಾಡಿದರು.

Related posts

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರವರಿಗೆ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಮನವಿ

Suddi Udaya

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ನಾವೂರು ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಜನ್ಮ ದಿನಾಚರಣೆ ಹಾಗೂ ಉದ್ಯೋಗ ಖಾತರಿ ಯೋಜನೆ ಗ್ರಾಮ ಸಭೆ

Suddi Udaya

ತೆಂಕುತಿಟ್ಟಿನ ಖ್ಯಾತ ಭಾಗವತ ಮಹೇಶ್ ಕನ್ಯಾಡಿಯವರ ಮೊಬೈಲ್ ಕಳವು

Suddi Udaya

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಹಲ್ಲೆ: ಪಂಚಾಯತ್ ಮೊಬೈಲ್ ಗೆ ಹಾನಿ, ದರೋಡೆ ಆರೋಪ: ಪಿಡಿಒ ದೂರಿನಂತೆ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ: ನಮ್ಮೂರು ನಮ್ಮ ಕೆರೆ ಸಮಿತಿ ಸದಸ್ಯರೊಂದಿಗೆ ಸಂವಾದ ಹಾಗೂ ಮಾರ್ಗದರ್ಶನ ಕಾರ್ಯಕ್ರಮ

Suddi Udaya
error: Content is protected !!