ಕಳೆಂಜ ಗೋಶಾಲೆಯಲ್ಲಿ ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಡಿಪ್ಲೊಮಾ ಕಾಲೇಜ್ ಉಜಿರೆ ಇದರ ರಾಷ್ಟ್ರೀಯ ಸ್ವಯಂ ಸೇವಾ ಶಿಬಿರ ಇದರ ವತಿಯಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರ 58 ನೇ ಪಟ್ಟಾಭಿಷೇಕದ ಪ್ರಯುಕ್ತ ಗೋಶಾಲೆಯ ಆವರಣದಲ್ಲಿ ಹಣ್ಣು ಹಂಪಲು ಗಿಡ ಮತ್ತು ಹಸಿರು ಹುಲ್ಲು ನಾಟಿ ಮಾಡಲಾಯಿತು.


ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಡಾ|ಎಂ. ಎಂ. ದಯಾಕರ್ ಮತ್ತು ಟ್ರಸ್ಟಿಗಳು, ಎನ್ ಎಸ್ ಎಸ್ ಯೋಜನಾಧಿಕಾರಿ ಪ್ರಕಾಶ್ ಗೌಡ, ಡಿಪ್ಲೊಮಾ ವಿದ್ಯಾರ್ಥಿಗಳು, ಗೋಶಾಲೆ ಸಿಬ್ಬಂದಿಗಳು ಉಪಸ್ಥಿತರಿದ್ದರು.











