September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಾ. ರೋಹನ್ ದೀಕ್ಷಿತ್ ರೋಟರೀ ಕ್ಲಬ್ ಸದಸ್ಯರಾಗಿ ಪದಗ್ರಹಣ

ಉಜಿರೆ ಎಸ್.ಡಿ.ಎಮ್ ಆಸ್ಪತ್ರೆಯಲ್ಲಿ ಇಎನ್ ಟಿ ಸರ್ಜನ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಡಾ. ರೋಹನ್ ದೀಕ್ಷಿತ್ ರವರು ಅ.12 ರಂದು ರೋಟರಿ ಕ್ಲಬ್ ಬೆಳ್ತಂಗಡಿಯ ಸದಸ್ಯರಾಗಿ ಸೇರಿದರು.

ಮುಂದಿನ ವರ್ಷದ ಅಸಿಸ್ಟೆಂಟ್ ಗವರ್ನರ್ ರೋ. ಡಾ. ಶಶಿಧರ್ ಡೋಂಗ್ರೆಯವರು ಈ ಪದಗ್ರಹಣ ಕಾರ್ಯಕ್ರಮ ನಿರ್ವಹಿಸಿ ಶುಭ ಹಾರೈಸಿದರು.
ಕೋಶಾಧಿಕಾರಿ ರೋ| ನಾರಾಯಣ ಪೈಯವರು, ತಮ್ಮ ಜನ್ಮ ದಿನದ ಪ್ರಯುಕ್ತ ಏರ್ಪಡಿಸಿದ್ದ ಭವ್ಯ ಕುಟುಂಬ ಸಮ್ಮಿಲನ ಕಾರ್ಯಕ್ರಮದ ಪ್ರಾರಂಭದಲ್ಲಿ, ಆ್ಯನ್ ಗೀತಾ ಪ್ರಕಾಶ ಪ್ರಭುರವರು ಪ್ರಾರ್ಥನೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ರೋ. ಪ್ರೊ.ಪ್ರಕಾಶ ಪ್ರಭುಗಳು ಸ್ವಾಗತಿಸಿದರು. ಎಸ್.ಡಿ.ಎಂ ಆಸ್ಪತ್ರೆಯ ಚೀಫ್ ಮೆಡಿಕಲ್ ಆಫೀಸರ್ ಡಾ ಸಾತ್ವಿಕರವರು ಡಾ.ರೋಹನ ದೀಕ್ಷಿತರನ್ನು ಸಭೆಗೆ ಪರಿಚಯಿಸಿದರು. ಡಾ.ರೋಹನ್ ರವರು ತಮಗೆ ಇಂತಹ ಅಂತರಾಷ್ಟ್ರೀಯ ಸೇವಾ ಸಂಸ್ಥೆಯ ಸದಸ್ಯತ್ವವನ್ನು ನೀಡಿದುದಕ್ಕಾಗಿ ಧನ್ಯವಾದ ಸಲ್ಲಿಸಿದರು.

ಡಾ. ಎಂ.ಎಂ ದಯಾಕರರು ಧನ್ಯವಾದವಿತ್ತರು. ರೋಟರಿ ಹಿರಿಯ ಸದಸ್ಯರಾದ ಪುಂಡಲೀಕ ಭಟ್, ಡಾ. ನಿಖಿತ, ರೋಟರೀ ಸದಸ್ಯರು, ಆ್ಯನ್ಸ್ ಗಳು, ಆ್ಯನೆಟ್ಗಳು ಭಾಗವಹಿಸಿದರು.

ಡಾ. ಅಂಕಿತಾ ಭಟ್, ಗೀತಾ ಪ್ರಭು,ಲಿಲ್ಲಿ ಆ್ಯಂಟೋನಿ,ಸುಜಾತ ಅಣ್ಣಿ ಪೂಜಾರಿ, ವೀಣಾ ಮಯ್ಯ, ಡಾ ಶ್ರೀಹರಿ ಮತ್ತು ಪ್ರೊ. ಪ್ರಕಾಶ ಪ್ರಭು ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya

ನಡ ಸ.ಪ.ಪೂ. ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಗೆ ನುಡಿನಮನ

Suddi Udaya

ಮೊಗ್ರು : ಮುಗೇರಡ್ಕ ಅಲೆಕ್ಕಿ ಜೈ ಶ್ರೀ ರಾಮ ಶಿಶುಮಂದಿರ ಆಶ್ರಯದಲ್ಲಿ ನಡೆದ ರೀಲ್ಸ್ ರಂಗೋಲಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

Suddi Udaya

ಕುವೆಟ್ಟು: ಕರ್ತವ್ಯ ಲೋಪ ಎಸಗಿದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ: ಸಾಮಾನ್ಯ ಸಭೆ ಬಹಿಷ್ಕರಿಸಿದ ಸದಸ್ಯರು

Suddi Udaya

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ದೈವಸ್ಥಾನಕ್ಕೆ ದೇಣಿಗೆ ಹಸ್ತಾಂತರ

Suddi Udaya
error: Content is protected !!