22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಾ. ರೋಹನ್ ದೀಕ್ಷಿತ್ ರೋಟರೀ ಕ್ಲಬ್ ಸದಸ್ಯರಾಗಿ ಪದಗ್ರಹಣ

ಉಜಿರೆ ಎಸ್.ಡಿ.ಎಮ್ ಆಸ್ಪತ್ರೆಯಲ್ಲಿ ಇಎನ್ ಟಿ ಸರ್ಜನ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಡಾ. ರೋಹನ್ ದೀಕ್ಷಿತ್ ರವರು ಅ.12 ರಂದು ರೋಟರಿ ಕ್ಲಬ್ ಬೆಳ್ತಂಗಡಿಯ ಸದಸ್ಯರಾಗಿ ಸೇರಿದರು.

ಮುಂದಿನ ವರ್ಷದ ಅಸಿಸ್ಟೆಂಟ್ ಗವರ್ನರ್ ರೋ. ಡಾ. ಶಶಿಧರ್ ಡೋಂಗ್ರೆಯವರು ಈ ಪದಗ್ರಹಣ ಕಾರ್ಯಕ್ರಮ ನಿರ್ವಹಿಸಿ ಶುಭ ಹಾರೈಸಿದರು.
ಕೋಶಾಧಿಕಾರಿ ರೋ| ನಾರಾಯಣ ಪೈಯವರು, ತಮ್ಮ ಜನ್ಮ ದಿನದ ಪ್ರಯುಕ್ತ ಏರ್ಪಡಿಸಿದ್ದ ಭವ್ಯ ಕುಟುಂಬ ಸಮ್ಮಿಲನ ಕಾರ್ಯಕ್ರಮದ ಪ್ರಾರಂಭದಲ್ಲಿ, ಆ್ಯನ್ ಗೀತಾ ಪ್ರಕಾಶ ಪ್ರಭುರವರು ಪ್ರಾರ್ಥನೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ರೋ. ಪ್ರೊ.ಪ್ರಕಾಶ ಪ್ರಭುಗಳು ಸ್ವಾಗತಿಸಿದರು. ಎಸ್.ಡಿ.ಎಂ ಆಸ್ಪತ್ರೆಯ ಚೀಫ್ ಮೆಡಿಕಲ್ ಆಫೀಸರ್ ಡಾ ಸಾತ್ವಿಕರವರು ಡಾ.ರೋಹನ ದೀಕ್ಷಿತರನ್ನು ಸಭೆಗೆ ಪರಿಚಯಿಸಿದರು. ಡಾ.ರೋಹನ್ ರವರು ತಮಗೆ ಇಂತಹ ಅಂತರಾಷ್ಟ್ರೀಯ ಸೇವಾ ಸಂಸ್ಥೆಯ ಸದಸ್ಯತ್ವವನ್ನು ನೀಡಿದುದಕ್ಕಾಗಿ ಧನ್ಯವಾದ ಸಲ್ಲಿಸಿದರು.

ಡಾ. ಎಂ.ಎಂ ದಯಾಕರರು ಧನ್ಯವಾದವಿತ್ತರು. ರೋಟರಿ ಹಿರಿಯ ಸದಸ್ಯರಾದ ಪುಂಡಲೀಕ ಭಟ್, ಡಾ. ನಿಖಿತ, ರೋಟರೀ ಸದಸ್ಯರು, ಆ್ಯನ್ಸ್ ಗಳು, ಆ್ಯನೆಟ್ಗಳು ಭಾಗವಹಿಸಿದರು.

ಡಾ. ಅಂಕಿತಾ ಭಟ್, ಗೀತಾ ಪ್ರಭು,ಲಿಲ್ಲಿ ಆ್ಯಂಟೋನಿ,ಸುಜಾತ ಅಣ್ಣಿ ಪೂಜಾರಿ, ವೀಣಾ ಮಯ್ಯ, ಡಾ ಶ್ರೀಹರಿ ಮತ್ತು ಪ್ರೊ. ಪ್ರಕಾಶ ಪ್ರಭು ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು.

Related posts

ಪರೀಕ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಜಾರಿಗೆ ಬೈಲು ಸಮೀಪ ಟ್ಯಾಂಕರ್, ಕಾರು ಡಿಕ್ಕಿ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ಪದಗ್ರಹಣ ಸಮಾರಂಭ

Suddi Udaya

ನಿಡ್ಲೆ ಬೂತ್ ಗೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಭೇಟಿ

Suddi Udaya
error: Content is protected !!