July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಇದರ ವತಿಯಿಂದ ದಿ| ನಾಗೇಶ್ ಆಚಾರ್ಯ ಅವರ ಸವಿ ನೆನಪಿಗಾಗಿ ಸಾವ್ಯ ದಲ್ಲಿ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಆಧಾರ್ ತಿದ್ದುಪಡಿ ಯೊಂದಿಗೆ ಹಲವು ಬಗೆಯ ಇನ್ಶೂರೆನ್ಸ್ ಗಳ ಮಾಡುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜ ಸಾವ್ಯದಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳು ಮಾದರಿಯಾಗುವ ಕಾರ್ಯಕ್ರಮಗಳು ಮುಂದೆ ಸಾವ್ಯ ಗ್ರಾಮದಲ್ಲಿ ಕನಿಷ್ಠ 100 ದಿನ ಪ್ರತಿ ಮನೆಯಲ್ಲಿ ಮನೆಯಲ್ಲಿಯೇ ಮಾಡಿದ ತರಕಾರಿ ಬಳಸುವ ರೀತಿ ಆಗುವಂತೆ ಕೇಳಿಕೊಂಡರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷ ನಿತಿನ್ ಅಂಡಿಂಜೆ ವಹಿಸಿ ಮಾತನಾಡಿ ಮುಂದೆಯು ಇಂತಹ ಕಾರ್ಯಕ್ರಮ ಟ್ರಸ್ಟ್ ವತಿಯಿಂದ ಮುಂದುವರಿಯಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರಾದ ಹರೀಶ್ ಹೆಗ್ಡೆ, ಸರೋಜ, ಸುಜಾತ, ಟ್ರಸ್ಟ್ ಅಧ್ಯಕ್ಷರಾದ ರಕ್ಷಿತ್ ಆರ್, ಕಾರ್ಯಕಾರಣಿ ಅಧ್ಯಕ್ಷರಾದ ಹರೀಶ್ ಮರೆಜಾರ್ ಭಾಗವಹಿಸಿದ್ದರು. ಟ್ರಸ್ಟ್ ನ ಮಹಿಳಾ ಘಟಕದ ಹೊಸ ತಂಡ ಉದ್ಘಾಟನೆ ಗೊಂಡಿತು.

Related posts

ಬಿಸಿಲ ಝಳಕ್ಕೆ ತಂಪೆರೆದ ವರುಣ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯ ಎಂ. ಮೃತ್ಯುಂಜಯ, ಕೊರಗಪ್ಪ ಹೆಗ್ಡೆ, ಅನಿತಾ ಶಿಂಗಾಯಿ ಉಪ ತಹಸೀಲ್ದಾರ್ ಆಗಿ ಭಡ್ತಿ

Suddi Udaya

ಬಂದಾರು: ಬಿಜೆಪಿ ಕಾರ್ಯಕರ್ತರಿಂದ ಬಿರುಸಿನ ಮತಪ್ರಚಾರ

Suddi Udaya

ಗುರುದೇವ ಮಠದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya
error: Content is protected !!