September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಳಂತಿಲದಲ್ಲಿ ಕುಣಿತ ಭಜನಾ ತರಬೇತಿ ಆರಂಭೋತ್ಸವ

ಇಳಂತಿಲ : ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ನೇಜಿಕಾರು ಇಳಂತಿಲ ಇದರ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಇದರ ಸಹಯೋಗದೊಂದಿಗೆ ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮವು ಉದಯ ಕುಮಾರ್ ನೇಜಿಕಾರು ಇವರ ಅಧ್ಯಕ್ಷತೆಯನ್ನು ನೆರವೇರಿತು.

ಚಾರ್ ಧಾಮ್ ಯಾಥ್ರಾ ಸಂಘದ ಪ್ರಮುಖರಾದ ಶ್ರೀಕೃಷ್ಣ ಶೆಣೈ ಉಪ್ಪಿನಂಗಡಿ ದೀಪ ಪ್ರಜ್ವಲನೆ ಗೈದು ಶುಭ ಹಾರೈಸಿದರು.

ಬೆಳ್ತಂಗಡಿ ಭಜನಾ ತರಬೇತುದಾರರ ಸಂಘದ ಅಧ್ಯಕ್ಷ ಸಂದೇಶ್ ಮದ್ದಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಭಜನಾ ತರಬೇತಿಯ ಉದ್ದೇಶ ರೂಪು-ರೇಷಗಳ ಬಗ್ಗೆ ಮಾರ್ಗದರ್ಶನವನ್ನು ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಜನಾ ಮಂಡಳಿಯ ಗೌರವಾಧ್ಯಕ್ಷ ಸುರೇಶ್ ಪೈ ನೇಜಿಕಾರು, ಮಂಜುನಾಥೇಶ್ವರ ಭಜನಾ ಪರಿಷತ್ ಸಮನ್ವಯಧಿಕಾರಿಗಳಾದ ಸಂತೋಷ್ ಪಿ ಅಳಿಯೂರು, ಕೇಶವ , ಇಳಂತಿಲ ಶಿಶುಮಂದಿರ ಕಾರ್ಯದರ್ಶಿ ರವಿ ಇಳಂತಿಲ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಣಿಯೂರು ವಲಯದ ಮೇಲ್ವಿಚಾರಕಿ ಕು. ಶಿಲ್ಪಾ, ಭಜನಾ ಮಂಡಳಿಯ ಹಿರಿಯ ಸದಸ್ಯರಾದ ಬಾಬು ಗೌಡ ನೇಜಿಕಾರು, ಭಜನಾ ಪರಿಷತ್ ಗುರುವಾಯನೆಕರೆಯ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರಾ ಉಪಸ್ಥಿತರಿದ್ರದು.

ಕಾರ್ಯಕ್ರಮದಲ್ಲಿ ಭಜನಾ ಮಂಡಳಿ ಮತ್ತು ಮಿತ್ರವೃಂದ ನೇಜಿಕಾರು ಸದಸ್ಯರು , ಮಾತೆಯರು ಉಪಸ್ಥಿತರಿದ್ದರು. ನಯನ್ ಕುಮಾರ್ ನೇಜಿಕಾರು ಸ್ವಾಗತಿಸಿ ವಂದಿಸಿದರು. ವಿನಯ್ ಕುಮಾರ್ ನೇಜಿಕಾರು ಕಾರ್ಯಕ್ರಮ ನಿರೂಪಿಸಿದರು.

Related posts

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ : ಲೆಕ್ಕಪತ್ರ ಮಂಡನೆ, ಸ್ಮರಣಸಂಚಿಕೆ ಬಿಡುಗಡೆ

Suddi Udaya

ಕೆಎಸ್‌ಸಿಎ ಅಂತರ ವಲಯ ಕ್ರಿಕೆಟ್‌ಗೆ ಸೇಕ್ರೆಡ್ ಹಾರ್ಟ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಆಯ್ಕೆ

Suddi Udaya

ಗುರುವಾಯನಕೆರೆ: ಶ್ರೀ ಶಾರದಾಂಭ ಭಜನಾ ಮಂಡಳಿ: ಶ್ರೀ ವರಮಹಾಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾಜಿ‌ ಸಚಿವ ಗಂಗಾಧರ ಗೌಡರವರಿಂದ ಹಕ್ಕು ಚಲಾವಣೆ

Suddi Udaya

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು

Suddi Udaya

ಕನ್ಯಾಡಿ II ಸ.ಉ. ಹಿ. ಪ್ರಾ. ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya
error: Content is protected !!