22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಳಂತಿಲದಲ್ಲಿ ಕುಣಿತ ಭಜನಾ ತರಬೇತಿ ಆರಂಭೋತ್ಸವ

ಇಳಂತಿಲ : ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ನೇಜಿಕಾರು ಇಳಂತಿಲ ಇದರ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಇದರ ಸಹಯೋಗದೊಂದಿಗೆ ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮವು ಉದಯ ಕುಮಾರ್ ನೇಜಿಕಾರು ಇವರ ಅಧ್ಯಕ್ಷತೆಯನ್ನು ನೆರವೇರಿತು.

ಚಾರ್ ಧಾಮ್ ಯಾಥ್ರಾ ಸಂಘದ ಪ್ರಮುಖರಾದ ಶ್ರೀಕೃಷ್ಣ ಶೆಣೈ ಉಪ್ಪಿನಂಗಡಿ ದೀಪ ಪ್ರಜ್ವಲನೆ ಗೈದು ಶುಭ ಹಾರೈಸಿದರು.

ಬೆಳ್ತಂಗಡಿ ಭಜನಾ ತರಬೇತುದಾರರ ಸಂಘದ ಅಧ್ಯಕ್ಷ ಸಂದೇಶ್ ಮದ್ದಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಭಜನಾ ತರಬೇತಿಯ ಉದ್ದೇಶ ರೂಪು-ರೇಷಗಳ ಬಗ್ಗೆ ಮಾರ್ಗದರ್ಶನವನ್ನು ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಜನಾ ಮಂಡಳಿಯ ಗೌರವಾಧ್ಯಕ್ಷ ಸುರೇಶ್ ಪೈ ನೇಜಿಕಾರು, ಮಂಜುನಾಥೇಶ್ವರ ಭಜನಾ ಪರಿಷತ್ ಸಮನ್ವಯಧಿಕಾರಿಗಳಾದ ಸಂತೋಷ್ ಪಿ ಅಳಿಯೂರು, ಕೇಶವ , ಇಳಂತಿಲ ಶಿಶುಮಂದಿರ ಕಾರ್ಯದರ್ಶಿ ರವಿ ಇಳಂತಿಲ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಣಿಯೂರು ವಲಯದ ಮೇಲ್ವಿಚಾರಕಿ ಕು. ಶಿಲ್ಪಾ, ಭಜನಾ ಮಂಡಳಿಯ ಹಿರಿಯ ಸದಸ್ಯರಾದ ಬಾಬು ಗೌಡ ನೇಜಿಕಾರು, ಭಜನಾ ಪರಿಷತ್ ಗುರುವಾಯನೆಕರೆಯ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರಾ ಉಪಸ್ಥಿತರಿದ್ರದು.

ಕಾರ್ಯಕ್ರಮದಲ್ಲಿ ಭಜನಾ ಮಂಡಳಿ ಮತ್ತು ಮಿತ್ರವೃಂದ ನೇಜಿಕಾರು ಸದಸ್ಯರು , ಮಾತೆಯರು ಉಪಸ್ಥಿತರಿದ್ದರು. ನಯನ್ ಕುಮಾರ್ ನೇಜಿಕಾರು ಸ್ವಾಗತಿಸಿ ವಂದಿಸಿದರು. ವಿನಯ್ ಕುಮಾರ್ ನೇಜಿಕಾರು ಕಾರ್ಯಕ್ರಮ ನಿರೂಪಿಸಿದರು.

Related posts

ಮಹಾಕುಂಭ ಮೇಳದಲ್ಲಿ ಗರ್ಡಾಡಿ, ನಿಟ್ಟಡೆ ಪಡಂಗಡಿ ಶಕ್ತಿ ಕೇಂದ್ರದ ಪ್ರಮುಖ್ ರಿಂದ ಪುಣ್ಯಸ್ನಾನ

Suddi Udaya

ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 23ನೇ ರಾಜ್ಯ ಮಟ್ಟದ ಅಂಚೆ – ಕುಂಚ ಸ್ಪರ್ಧೆಯ ವಿಜೇತರ ಪಟ್ಟಿ ಪ್ರಕಟ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢ ಶಾಲಾ ಆರಂಭೋತ್ಸವ

Suddi Udaya

ಕಣಿಯೂರು: ಕುಡುವಂತಿ ನಿವಾಸಿ ಪುತ್ತು ನಾಯ್ಕ ನಿಧನ

Suddi Udaya

ಕುಂಭಶ್ರೀ ಆಂ.ಮಾ. ಶಾಲೆಯ ಸಂಸ್ಥಾಪಕ ಗಿರೀಶ್ ಕೆ ಎಚ್ ರವರಿಂದ ಉಚಿತ ಪುಸ್ತಕ ವಿತರಣೆ

Suddi Udaya

ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಮನೋಹರ್ ಪ್ರಸಾದ್ ನಿಧನ

Suddi Udaya
error: Content is protected !!