25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋದ್ಯೆ ಶ್ರವಣಧಾಮಕ್ಕೆ ಭೇಟಿ

ಬೆಳ್ತಂಗಡಿ: ಉತ್ತರ ಭಾರತದ ಪ್ರವಾಸದಲ್ಲಿರುವ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶ ಮಹಾ ಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅ. 12ರಂದು ಅಯೋದ್ಯೆ ಶ್ರವಣಧಾಮಕ್ಕೆ ಭೇಟಿ ನೀಡಿದರು.

ರಾಮಾಯಣ ಕಾಲದ ಶ್ರವಣ ಕುಮಾರನ ಚರಿತ್ರೆಯಲ್ಲಿ ಕುರುಡರಾದ ವೃದ್ಧ ತಂದೆ ತಾಯಿಯನ್ನು ತಕ್ಕಡಿಯಲ್ಲಿ ಕೂರಿಸಿ ತನ್ನ ಭುಜದ ಮೇಲೆ ಹೊತ್ತುಕೊಂಡು ಅಯೋಧ್ಯೆಯಿಂದ ಸುಮಾರು ಐವತ್ತು ಕಿಲೋಮೀಟರ್ ದೂರದ ಒಂದು ಜಾಗದಲ್ಲಿ ಕುಳ್ಳಿರಿಸಿ ಅವರಿಗೆ ಬಾಯಾರಿಕೆಗಾಗಿ ನೀರು ತರಲು ಹೋದ ಸಂದರ್ಭದಲ್ಲಿ ನೀರು ಬಿಂದಿಗೆಗೆ ತುಂಬಿಸುವ ಶಬ್ದ ಬಂದಾಗ ಜಿಂಕೆ ಒಂದು ನೀರು ಕುಡಿಯಲು ಬಂದಿದೆ ಎಂದು ತಿಳಿದ ಚಕ್ರವರ್ತಿ ಮಹಾರಾಜ ದಶರಥನು ಶಬ್ದವೇದಿ ಬಾಣ ಪ್ರಯೋಗಿಸಿದಾಗ ಶ್ರವಣ ಕುಮಾರನ ಹತ್ಯೆಯಾಗುತ್ತದೆ. ಶ್ರವಣಕುಮಾರನ ತಂದೆ ತಾಯಿಗಳು ದಶರಥ ಮಹಾರಾಜರಿಗೆ ಶಾಪ ಕೊಟ್ಟಂತ ಸ್ಥಳ ಇಂದು ಶ್ರವಣಧಾಮ ಎಂಬ ಹೆಸರಿನಿಂದ ಬಹುದೊಡ್ಡ ಪುಣ್ಯಕ್ಷೇತ್ರವಾಗಿದೆ. ಈ ಕ್ಷೇತ್ರಕ್ಕೆ ತಮ್ಮ ಶಿಷ್ಯ ಪರಿವಾರದೊಂದಿಗೆ ಹೋಗಿ, ಕ್ಷೇತ್ರ ದರ್ಶನ ಮಾಡಿದರು.

Related posts

ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ಗಾಂಧೀಜಿ ಜಯಂತಿ ಆಚರಣೆ

Suddi Udaya

ನಾರಾವಿ ಪೇಟೆಯಲ್ಲಿ ಬಿಜೆಪಿ ಬಿರುಸಿನ ಮತಪ್ರಚಾರ

Suddi Udaya

ಫೆ 16: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಜಾತ್ರೋತ್ಸವ,ಫೆ 19 ಭೈರವಕಲ್ಲಿನ ಪುರುಷರಾಯ ಜಾತ್ರೆ

Suddi Udaya

ಧರ್ಮಸ್ಥಳ: ಆಟೋ ಚಾಲಕ ಸುಂದರ ಗೌಡ ನಿಧನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹದಿಮೂರನೇ ಸುತ್ತಿನಲ್ಲಿ 13162 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಉಜಿರೆಯಲ್ಲಿ ದ್ವಿಚಕ್ರ ವಾಹನ ರ್‍ಯಾಲಿ :

Suddi Udaya
error: Content is protected !!