22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋದ್ಯೆ ಶ್ರವಣಧಾಮಕ್ಕೆ ಭೇಟಿ

ಬೆಳ್ತಂಗಡಿ: ಉತ್ತರ ಭಾರತದ ಪ್ರವಾಸದಲ್ಲಿರುವ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶ ಮಹಾ ಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅ. 12ರಂದು ಅಯೋದ್ಯೆ ಶ್ರವಣಧಾಮಕ್ಕೆ ಭೇಟಿ ನೀಡಿದರು.

ರಾಮಾಯಣ ಕಾಲದ ಶ್ರವಣ ಕುಮಾರನ ಚರಿತ್ರೆಯಲ್ಲಿ ಕುರುಡರಾದ ವೃದ್ಧ ತಂದೆ ತಾಯಿಯನ್ನು ತಕ್ಕಡಿಯಲ್ಲಿ ಕೂರಿಸಿ ತನ್ನ ಭುಜದ ಮೇಲೆ ಹೊತ್ತುಕೊಂಡು ಅಯೋಧ್ಯೆಯಿಂದ ಸುಮಾರು ಐವತ್ತು ಕಿಲೋಮೀಟರ್ ದೂರದ ಒಂದು ಜಾಗದಲ್ಲಿ ಕುಳ್ಳಿರಿಸಿ ಅವರಿಗೆ ಬಾಯಾರಿಕೆಗಾಗಿ ನೀರು ತರಲು ಹೋದ ಸಂದರ್ಭದಲ್ಲಿ ನೀರು ಬಿಂದಿಗೆಗೆ ತುಂಬಿಸುವ ಶಬ್ದ ಬಂದಾಗ ಜಿಂಕೆ ಒಂದು ನೀರು ಕುಡಿಯಲು ಬಂದಿದೆ ಎಂದು ತಿಳಿದ ಚಕ್ರವರ್ತಿ ಮಹಾರಾಜ ದಶರಥನು ಶಬ್ದವೇದಿ ಬಾಣ ಪ್ರಯೋಗಿಸಿದಾಗ ಶ್ರವಣ ಕುಮಾರನ ಹತ್ಯೆಯಾಗುತ್ತದೆ. ಶ್ರವಣಕುಮಾರನ ತಂದೆ ತಾಯಿಗಳು ದಶರಥ ಮಹಾರಾಜರಿಗೆ ಶಾಪ ಕೊಟ್ಟಂತ ಸ್ಥಳ ಇಂದು ಶ್ರವಣಧಾಮ ಎಂಬ ಹೆಸರಿನಿಂದ ಬಹುದೊಡ್ಡ ಪುಣ್ಯಕ್ಷೇತ್ರವಾಗಿದೆ. ಈ ಕ್ಷೇತ್ರಕ್ಕೆ ತಮ್ಮ ಶಿಷ್ಯ ಪರಿವಾರದೊಂದಿಗೆ ಹೋಗಿ, ಕ್ಷೇತ್ರ ದರ್ಶನ ಮಾಡಿದರು.

Related posts

ಶಿಬಾಜೆ: ರಸ್ತೆಗೆ ಅಡ್ಡಲಾಗಿ ಇಟ್ಟಿಗೆ ಇಟ್ಟ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕನಿಗೆ ಗಾಯ ಆರೋಪಿ ವಿರುದ್ಧ ಪ್ರಕರಣ ದಾಖಲು

Suddi Udaya

ಭಜನಾ ಪರಿಷತ್ ಲಾಯಿಲ ವಲಯದ ಅಧ್ಯಕ್ಷರಾಗಿ ಪಿ. ಚಂದ್ರಶೇಖರ ಸಾಲ್ಯಾನ್, ಕಾರ್ಯದರ್ಶಿಯಾಗಿ ಅಖಿಲೇಶ್ ಚಂದ್ಕೂರು, ಕೋಶಾಧಿಕಾರಿಯಾಗಿ ದಿನೇಶ್ ಜಾನ್ಲಪು

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ: ವಾಣಿ ಆಂ.ಮಾ. ಪ್ರೌಢಶಾಲೆಯ ವಿದ್ಯಾರ್ಥಿ ಕು|ಧೃತಿ ಸಿ. ಗೌಡರಿಗೆ ಪ್ರಶಸ್ತಿ

Suddi Udaya

“ನಮ್ಮ ಜವನೆರ್ ವಾಟ್ಸಪ್ ಗ್ರೂಪ್ ಅಳದಂಗಡಿ” ಹಾಗೂ “ಪಬ್ ಜಿ “ಗ್ರೂಪಿನ ಸದಸ್ಯರಿಂದ ಸಹಾಯಧನ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya

ಉಜಿರೆ: ರತ್ನಮಾನಸ “ಜೀವನ ಶಿಕ್ಷಣ “ವಸತಿ ನಿಲಯ ಪ್ರವೇಶೋತ್ಸವ

Suddi Udaya
error: Content is protected !!