23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಾ. ರೋಹನ್ ದೀಕ್ಷಿತ್ ರೋಟರೀ ಕ್ಲಬ್ ಸದಸ್ಯರಾಗಿ ಪದಗ್ರಹಣ

ಉಜಿರೆ ಎಸ್.ಡಿ.ಎಮ್ ಆಸ್ಪತ್ರೆಯಲ್ಲಿ ಇಎನ್ ಟಿ ಸರ್ಜನ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಡಾ. ರೋಹನ್ ದೀಕ್ಷಿತ್ ರವರು ಅ.12 ರಂದು ರೋಟರಿ ಕ್ಲಬ್ ಬೆಳ್ತಂಗಡಿಯ ಸದಸ್ಯರಾಗಿ ಸೇರಿದರು.

ಮುಂದಿನ ವರ್ಷದ ಅಸಿಸ್ಟೆಂಟ್ ಗವರ್ನರ್ ರೋ. ಡಾ. ಶಶಿಧರ್ ಡೋಂಗ್ರೆಯವರು ಈ ಪದಗ್ರಹಣ ಕಾರ್ಯಕ್ರಮ ನಿರ್ವಹಿಸಿ ಶುಭ ಹಾರೈಸಿದರು.
ಕೋಶಾಧಿಕಾರಿ ರೋ| ನಾರಾಯಣ ಪೈಯವರು, ತಮ್ಮ ಜನ್ಮ ದಿನದ ಪ್ರಯುಕ್ತ ಏರ್ಪಡಿಸಿದ್ದ ಭವ್ಯ ಕುಟುಂಬ ಸಮ್ಮಿಲನ ಕಾರ್ಯಕ್ರಮದ ಪ್ರಾರಂಭದಲ್ಲಿ, ಆ್ಯನ್ ಗೀತಾ ಪ್ರಕಾಶ ಪ್ರಭುರವರು ಪ್ರಾರ್ಥನೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ರೋ. ಪ್ರೊ.ಪ್ರಕಾಶ ಪ್ರಭುಗಳು ಸ್ವಾಗತಿಸಿದರು. ಎಸ್.ಡಿ.ಎಂ ಆಸ್ಪತ್ರೆಯ ಚೀಫ್ ಮೆಡಿಕಲ್ ಆಫೀಸರ್ ಡಾ ಸಾತ್ವಿಕರವರು ಡಾ.ರೋಹನ ದೀಕ್ಷಿತರನ್ನು ಸಭೆಗೆ ಪರಿಚಯಿಸಿದರು. ಡಾ.ರೋಹನ್ ರವರು ತಮಗೆ ಇಂತಹ ಅಂತರಾಷ್ಟ್ರೀಯ ಸೇವಾ ಸಂಸ್ಥೆಯ ಸದಸ್ಯತ್ವವನ್ನು ನೀಡಿದುದಕ್ಕಾಗಿ ಧನ್ಯವಾದ ಸಲ್ಲಿಸಿದರು.

ಡಾ. ಎಂ.ಎಂ ದಯಾಕರರು ಧನ್ಯವಾದವಿತ್ತರು. ರೋಟರಿ ಹಿರಿಯ ಸದಸ್ಯರಾದ ಪುಂಡಲೀಕ ಭಟ್, ಡಾ. ನಿಖಿತ, ರೋಟರೀ ಸದಸ್ಯರು, ಆ್ಯನ್ಸ್ ಗಳು, ಆ್ಯನೆಟ್ಗಳು ಭಾಗವಹಿಸಿದರು.

ಡಾ. ಅಂಕಿತಾ ಭಟ್, ಗೀತಾ ಪ್ರಭು,ಲಿಲ್ಲಿ ಆ್ಯಂಟೋನಿ,ಸುಜಾತ ಅಣ್ಣಿ ಪೂಜಾರಿ, ವೀಣಾ ಮಯ್ಯ, ಡಾ ಶ್ರೀಹರಿ ಮತ್ತು ಪ್ರೊ. ಪ್ರಕಾಶ ಪ್ರಭು ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು.

Related posts

ಒಡಿಶಾದಲ್ಲಿ ರಾಷ್ಟ್ರೀಯ ಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಕರ್ನಾಟಕ ಮಹಿಳಾ ತಂಡವನ್ನು ಪ್ರತಿನಿಧಿಸಲಿರುವ ಎಸ್.ಡಿ.ಎಂ ನ ಕ್ರೀಡಾಪಟುಗಳು

Suddi Udaya

ಬೆಳ್ತಂಗಡಿ ಜೈನ ಬಸದಿ ಬಳಿ ಕಾರುಗಳೆರಡು ಪರಸ್ಪರ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ಚೀಟಿ ಬಿಡುಗಡೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿಗೆ ನಿರ್ವಹಣಾ ಮೇಲ್ವಿಚಾರಕರು ಬೇಕಾಗಿದ್ದಾರೆ

Suddi Udaya

ಕೊಕ್ಕಡ: ಡ್ರೈವರ್ ಮೂರ್ಛೆಕ್ಕೊಳಗಾಗಿ ಏಕಾಏಕಿ ಚಲಿಸಿದ ವಾಹನ : ಜಂಕ್ಷನ್ ನಲ್ಲಿ ನಿಂತಿದ್ದ ಮಹಿಳೆಗೆ ಡಿಕ್ಕಿ

Suddi Udaya

ಬಳಂಜ: ಕರಿಯ ಪೂಜಾರಿ ಕೊಂಗುಳ ಅನಾರೋಗ್ಯದಿಂದ ನಿಧನ

Suddi Udaya
error: Content is protected !!