ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಮತ್ತು ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಉಜಿರೆ ಇದರ ಸಹಯೋಗದೊಂದಿಗೆ ಅ.12 ರಂದು ರಕ್ತದ ಕ್ಯಾನ್ಸರ್ ನಿಂದ ಬಳಲುತ್ತಿರುವ ಉಜಿರೆ ಗ್ರಾಮದ ಬಜಿಲ್ ಮಾರು ನಿವಾಸಿಯಾಗಿರುವ ಪುರಂದರ ಗೌಡ ಇವರ ವೈದ್ಯಕೀಯ ಚಿಕಿತ್ಸೆಗಾಗಿ ಹಣಕಾಸಿನ ನೆರವನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಅಧ್ಯಕ್ಷ ಮೋಹನ್ ಗೌಡ ಕಲ್ಮoಜ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು, ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಅಧ್ಯಕ ರಂಜನ್ ಜಿ ಗೌಡ ಬೆಳ್ತಂಗಡಿ ತಾಲೂಕು ಒಕ್ಕಲಿಗ ಸೇವಾ ಟ್ರಸ್ಟ್ ನ ಕಾರ್ಯಧ್ಯಕ್ಷ ಶ್ರೀನಿವಾಸ ಗೌಡ ಬೆಳಾಲು ಹಾಗೂ ಜಯಂತ ಗೌಡ ಗುರಿಪಳ್ಳ ಕಾರ್ಯಧ್ಯಕ್ಷರು ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮತ್ತು ಭರತ್ ಕುಮಾರ್ ಗೌಡ ಬಂಗಾಡಿ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ಹಾಗೂ ಟ್ರಸ್ಟ್ ನ ಸದಸ್ಯರುಗಳಾದ ವಸಂತ ಗೌಡ ಮರಕಡ ವಕೀಲರು, ನವೀನ್ ಗೌಡ ವಕೀಲರು, ಕಿಶೋರ್ ಗೌಡ ವಲಂಬ್ರ, ದಿನೇಶ್ ಗೌಡ ಕೊಯ್ಯೂರು ಹಾಗೂ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ದಿನೇಶ್ ಗೌಡ ಕಲ್ಲಾಜೆ ಉಪಸ್ಥಿತರಿದ್ದರು.











