25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಹಾಲು ಉತ್ಪಾದಕರ ಸ. ಸಂಘದಿಂದ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

ಪದ್ಮುಂಜ: ರಾಷ್ಟ್ರೀಯ ಗೋಕುಲ್ ಮಿಷನ್ ಯೋಜನೆ , ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ದ.ಕ ಹಾಲು ಉತ್ಪಾದಕರ ಒಕ್ಕೂಟದ ಆಶ್ರಯದಲ್ಲಿ ಪದ್ಮುಂಜ ಹಾಲು ಉತ್ಪಾದಕರ ಸ.ಸಂಘದ ನೇತೃತ್ವದಲ್ಲಿ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ ಸಂಘದ ನಿರ್ದೇಶಕರಾದ ರಾಜೇಶ್ ಜೈನ್ ಅಡೆಂಜ ರವರ ಮನೆಯಲ್ಲಿ ಅ.12ರಂದು ನಡೆಯಿತು.

ಕಾರ್ಯಕ್ರಮ ಉದ್ಘಾಟನೆಯನ್ನು ಪದ್ಮುಂಜ ಸಿ.ಎ ಬ್ಯಾಂಕ್ ನಿವೃತ್ತ ಮ್ಯಾನೇಜರ್ ರಘುಪತಿ ಭಟ್ ಅನಾಬೆ ನೆರವೇರಿಸಿದರು.

ಡಾ| ಜಿತೇಂದ್ರ ಪ್ರಸಾದ್ , ಡಾ| ರಾಜ್ ಕುಮಾರ್, ಡಾ| ಶುಭಂ ಇವರ ನೇತೃತ್ವದಲ್ಲಿ 9 ರಾಸುಗಳಿಗೆ ಭ್ರೂಣ ವರ್ಗಾವಣೆ ಮಾಡಲಾಯಿತು.

ಎಂ. ಜಯರಾಮ್ ಶೆಟ್ಟಿ ಸಹಕರಿಸಿದರು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಪುರುಷೋತ್ತಮ , ಉಪಾಧ್ಯಕ್ಷ ಉಮೇಶ್ ಗೌಡ, ನಿರ್ದೇಶಕರಾದ ಉಮೇಶ್ , ರಮಾನಂದ ಸುನೀಲ್ ಕುಮಾರ್, ಪುರುಷೋತ್ತಮ ಗೌಡ, ಕೃಷ್ಣ ನಾಯ್ಕ, ಶ್ರೀಮತಿ ಶಾರದಾ, ಪ್ರತಿಮಾ, ಸಂಘದ ಪ್ರಭಾರ ಕಾರ್ಯದರ್ಶಿ ಸತೀಶ್ ಕುಮಾರ್, ಹಾಗೂ ಸಂಘದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ವೇಣೂರು-ಪೆರ್ಮುಡ ಹೊನಲು ಬೆಳಕಿನ 33ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಮಿತ್ತಬಾಗಿಲು ಜನಾರ್ದನ ಗೌಡ ರವರಿಗೆವೀಲ್ ಚೆಯರ್ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಚಾಮಾ೯ಡಿ : ಮರಳು ಸಾಗಾಟದ ಲಾರಿ ವಶ

Suddi Udaya

ಉಜಿರೆ ರುಡ್ ಸೆಟ್ ಬಳಿ ಕಾರುಗಳು ಪರಸ್ಪರ ಡಿಕ್ಕಿ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಿಗೆ 12ರಲ್ಲಿ 12 ಭರ್ಜರಿ ಜಯ

Suddi Udaya
error: Content is protected !!