ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಹಾಲು ಉತ್ಪಾದಕರ ಸ. ಸಂಘದಿಂದ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

ಪದ್ಮುಂಜ: ರಾಷ್ಟ್ರೀಯ ಗೋಕುಲ್ ಮಿಷನ್ ಯೋಜನೆ , ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ದ.ಕ ಹಾಲು ಉತ್ಪಾದಕರ ಒಕ್ಕೂಟದ ಆಶ್ರಯದಲ್ಲಿ ಪದ್ಮುಂಜ ಹಾಲು ಉತ್ಪಾದಕರ ಸ.ಸಂಘದ ನೇತೃತ್ವದಲ್ಲಿ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ ಸಂಘದ ನಿರ್ದೇಶಕರಾದ ರಾಜೇಶ್ ಜೈನ್ ಅಡೆಂಜ ರವರ ಮನೆಯಲ್ಲಿ ಅ.12ರಂದು ನಡೆಯಿತು.

ಕಾರ್ಯಕ್ರಮ ಉದ್ಘಾಟನೆಯನ್ನು ಪದ್ಮುಂಜ ಸಿ.ಎ ಬ್ಯಾಂಕ್ ನಿವೃತ್ತ ಮ್ಯಾನೇಜರ್ ರಘುಪತಿ ಭಟ್ ಅನಾಬೆ ನೆರವೇರಿಸಿದರು.

ಡಾ| ಜಿತೇಂದ್ರ ಪ್ರಸಾದ್ , ಡಾ| ರಾಜ್ ಕುಮಾರ್, ಡಾ| ಶುಭಂ ಇವರ ನೇತೃತ್ವದಲ್ಲಿ 9 ರಾಸುಗಳಿಗೆ ಭ್ರೂಣ ವರ್ಗಾವಣೆ ಮಾಡಲಾಯಿತು.

ಎಂ. ಜಯರಾಮ್ ಶೆಟ್ಟಿ ಸಹಕರಿಸಿದರು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಪುರುಷೋತ್ತಮ , ಉಪಾಧ್ಯಕ್ಷ ಉಮೇಶ್ ಗೌಡ, ನಿರ್ದೇಶಕರಾದ ಉಮೇಶ್ , ರಮಾನಂದ ಸುನೀಲ್ ಕುಮಾರ್, ಪುರುಷೋತ್ತಮ ಗೌಡ, ಕೃಷ್ಣ ನಾಯ್ಕ, ಶ್ರೀಮತಿ ಶಾರದಾ, ಪ್ರತಿಮಾ, ಸಂಘದ ಪ್ರಭಾರ ಕಾರ್ಯದರ್ಶಿ ಸತೀಶ್ ಕುಮಾರ್, ಹಾಗೂ ಸಂಘದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಂಗೇರ ಬಿಗ್ರೇಡ್ ವತಿಯಿಂದ ಶ್ರೀಮತಿ ಬಿನುತಾ ಬಂಗೇರರ ಸಾರಥ್ಯದಲ್ಲಿ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

SKSSF ಮದ್ದಡ್ಕ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಕು. ಸೌಜನ್ಯ ಕೊಲೆ ಪ್ರಕರಣ: ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ಕುಕ್ಕವು- ಕೂಡಬೆಟ್ಟು ಸಂಪರ್ಕ ರಸ್ತೆಯ ಪಾದೆ ಕಿರು ಸೇತುವೆ ಬಳಿ ರಸ್ತೆ ಬಿರುಕು: ವಾಹನ ಸಂಚಾರ ಸ್ಥಗಿತ-ಜನರಲ್ಲಿ ಆತಂಕ

Suddi Udaya

ಮಾ.31ರೊಳಗೆ ಶಾಲಾ ಹಳೇ ವಿದ್ಯಾರ್ಥಿಗಳ ಸಂಘ ರಚಿಸುವಂತೆ ಶಿಕ್ಷಣ ಇಲಾಖೆ ಸೂಚನೆ

Suddi Udaya
error: Content is protected !!