25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶದಲ್ಲಿ ಲೋಪವಾಗಿಲ್ಲ: ರಾಜ್ಯ ಸರಕಾರ ಸಮರ್ಥನೆ

ಬೆಳ್ತಂಗಡಿ: ಸೌಜನ್ಯಾ ಸಾವಿಗೆ ನ್ಯಾಯ ದೊರಕಿಸಲು ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡೀಪಾರು ಮಾಡಿ ಹೊರಡಿಸಿರುವ ಆದೇಶದಲ್ಲಿ ಕಾನೂನು ಪ್ರಕ್ರಿಯೆ ಲೋಪವೂ ಆಗಿಲ್ಲ; ಸಹಜ ನ್ಯಾಯ ತತ್ವದ ಉಲ್ಲಂಘನೆಯೂ ಆಗಿಲ್ಲ ಎಂದು ರಾಜ್ಯ ಸರಕಾರ ಸಮರ್ಥಿಸಿಕೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ರಾಯಚೂರು ಜಿಲ್ಲೆ ಮಾನ್ವಿಗೆ ಗಡೀಪಾರು ಮಾಡಿ ಹೊರಡಿಸಲಾಗಿರುವ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಅ.13ರಂದು ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ತಾರಾನಾಥ ಪೂಜಾರಿ, ಗಡಿಪಾರು ಆದೇಶದಲ್ಲಿ ಒಂದಲ್ಲ, ಹತ್ತಾರು ಕಾನೂನು ಪ್ರಕ್ರಿಯೆಯ ಲೋಪಗಳಿವೆ. ಇಡೀ ಸರಕಾರ ಮತ್ತು ಗೃಹ ಇಲಾಖೆ ತಿಮರೋಡಿ ವಿರುದ್ಧ ನಿಂತಿದೆ. ತಿಮರೋಡಿ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಕುರಿತು ಯಾವುದೇ ವಿವರಗಳನ್ನು ಒದಗಿಸಲಾಗಿಲ್ಲ. ಈಗಾಗಲೇ ಸುಮಾರು 10 ಪ್ರಕರಣಗಳಲ್ಲಿ ಖುಲಾಸೆ ಆಗಿದ್ದು, ಎರಡು ಪ್ರಕರಣಗಳಲ್ಲಿ ಬಿ ರಿಪೋರ್ಟ್ ಸಲ್ಲಿಕೆಯಾಗಿದೆ. ಲೋಕಸಭೆ ಚುನಾವಣೆ ವೇಳೆ ಗಲಭೆ ಎಬ್ಬಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಆದರೆ, ಅದಕ್ಕೆ ಸಾಕ್ಷಿ ಕೊಟ್ಟಿಲ್ಲ. ಇವರ ಹೆದರಿಕೆಯಿಂದ ಸಾಕ್ಷಿಗಳು ಮುಂದೆ ಬರುವುದಿಲ್ಲ ಎಂದೆಲ್ಲ ಹೇಳಲಾಗಿದೆ. ಆದರೆ ಇದೆಲ್ಲವೂ ಸುಳ್ಳು ಎಂದರು. ಇದಕ್ಕೆ ಬಲವಾಗಿ ಆಕ್ಷೇಪಿಸಿದ ಅಡ್ವಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ತಿಮರೋಡಿ ಪರ ವಕೀಲರು ನ್ಯಾಯಾಲಯಕ್ಕೆ ಹೇಳುತ್ತಿರುವ ವಿವರಗಳು ಸರಿಯಲ್ಲ. ಸ್ಥಳೀಯ ನಿವಾಸಿಯಾಗಿರುವ ಮಹೇಶ್ ಶೆಟ್ಟಿ ತಿಮರೋಡಿ ಸೌಜನ್ಯಾ ಚಳವಳಿ ಹೆಸರಲ್ಲಿ ಏನು ಮಾಡುತ್ತಿದ್ದಾರೆ ಎಂಬುದು ಜನರಿಗೆ ಗೊತ್ತಿದೆ. ಸರಕಾರ ಸಹಜ ನ್ಯಾಯ ತತ್ವಕ್ಕೆ ವಿರುದ್ಧವಾಗಿ ನಡೆದುಕೊಂಡಿಲ್ಲ. ಅಲ್ಲದೇ ಅವರನ್ನು ಗಡೀಪಾರು ಮಾಡಿ ಹೊರಡಿಸಿದ ಆದೇಶದಲ್ಲಿ ಕಾನೂನು ಪ್ರಕ್ರಿಯೆಯ ಯಾವ ಲೋಪವೂ ಆಗಿಲ್ಲ ಎಂದು ವಿವರಿಸಿದರು. ಸುದೀರ್ಘ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ಆದೇಶ ಕಾಯ್ದಿರಿಸಿರುವುದಾಗಿ ತಿಳಿಸಿತು. ಅಲ್ಲದೆ, ಗಡಿಪಾರು ಆದೇಶಕ್ಕೆ ಸಂಬಂಧಿಸಿದಂತೆ ತಿಮರೋಡಿ ವಿರುದ್ಧ ಆತುರದ ಕ್ರಮ ಜರುಗಿಸದಂತೆ ಈ ಹಿಂದೆ ಹೊರಡಿಸಿದ್ದ ಮಧ್ಯಾಂತರ ಆದೇಶವನ್ನು ವಿಸ್ತರಿಸಿತು.

Related posts

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ, ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ, ವೈಭವದ ಶೋಭಾಯಾತ್ರೆ, ಕುಣಿತಾ ಭಜನೆ

Suddi Udaya

ಜ.13: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ ಮತ್ತು ದಂತಾ ಚಿಕಿತ್ಸಾ ಶಿಬಿರ

Suddi Udaya

ಸೋಣಂದೂರು: ಕೊಲ್ಪದಬೈಲು ಸಮೀಪ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ: ಮೆಸ್ಕಾಂ ಇಲಾಖೆಯಿಂದ ತೆರವು ಕಾರ್ಯ

Suddi Udaya

ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ಉಜಿರೆ ಗ್ರಾಮ ಪಂಚಾಯತಿಯಲ್ಲಿ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya

ಧರ್ಮಸ್ಥಳ: ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಬೆಳ್ಳಿಹಬ್ಬ ಸಂಭ್ರಮ: ರಜತ ಸಂಚಿಕೆ ಲೋಕಾರ್ಪಣೆ – ಸಾಧಕರಿಗೆ ಸನ್ಮಾನ

Suddi Udaya
error: Content is protected !!