25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆಯು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸೀತಾ ರವರ ಅಧ್ಯಕ್ಷತೆಯಲ್ಲಿ ಜರುಗಿತು.

ಪಂಚಾಯತ್ ಅಧ್ಯಕ್ಷೆ ಸವಿತಾ , ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಅಭಿವೃದ್ಧಿ ಅಧಿಕಾರಿ ಶ್ರೀಧರ ಹೆಗ್ಡೆ, ಕಾರ್ಯದರ್ಶಿ ನಿರ್ಮಲ್ ಕುಮಾರ್, ಪಂಚಾಯತ್ ಸದಸ್ಯರು ಹಾಗೂ ಒಕ್ಕೂಟದ ಎಲ್ಲಾ ಪದಾಧಿಕಾರಿಗಳು, ತಾಲೂಕು ಪಂಚಾಯತ್ ಸಂಯೋಜಕರಾದ ಜಯಾನಂದ, ಶ್ರೀ ಕಲಾ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

2024-25 ನೇ ಸಾಲಿನ ವರದಿಯನ್ನು ಮಲ್ಲಿಕಾ ಓದಿ ಮಂಡಿಸಿದರು. ತಾಲೂಕು ಸಂಯೋಜಕ ಜಯಾನಂದ ಪ್ರಾಸ್ತಾವಿಕ ಮಾತನಾಡಿ ಸಂಜೀವಿನಿ ಯೋಜನೆಯ ಬಗ್ಗೆ ಸದಸ್ಯರಿಗೆ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.

ಪಂಚಾಯತ್ ಅಧ್ಯಕ್ಷೆ ಸವಿತಾ ಸಂಜೀವಿನಿ ಯೋಜನೆಯಿಂದ ದೊರೆಯುವ ಸಾಲ ಸೌಲಭ್ಯ , ಸವಲತ್ತುಗಳನ್ನು ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟ ನೀಡುತ್ತಿದೆ ಎಂದು ಸಭೆಯಲ್ಲಿ ತಿಳಿಸಿದರು. ಉಪಾಧ್ಯಕ್ಷ ಲೋಕನಾಥ ಶೆಟ್ಟಿ ಮಾತನಾಡಿ ಸಂಜೀವಿನಿ ಯೋಜನೆಯಿಂದ ಮಹಿಳೆಯರು ಸ್ವಾವಲಂಬಿಯಾಗಿ ಜೀವನವನ್ನು ನಡೆಸುತ್ತಿದ್ದಾರೆ ಇವರಿಗೆ ಸ್ವ-ಉದ್ಯೋಗ ಮಾಡಲು ಒಕ್ಕೂಟವು ಪ್ರೇರಣೆಯನ್ನು ನೀಡುತ್ತಿದೆ ಎಂದು ಇದರ ಒಟ್ಟಿಗೆ ಪಂಚಾಯತ್ ಕೂಡ ಸಂಜೀವಿನಿ ಒಕ್ಕೂಟಕ್ಕೆ ಸಹಕಾರ ನೀಡುವುದಾಗಿ ತಿಳಿಸಿದರು.

ಕೃಷಿ ಸಖಿ ಸಮಲತಾ ಸ್ವಾಗತಿಸಿದರು. ಪಶುಶಖಿ ಗೀತಾ ಕಾರ್ಯಕ್ರಮ ನಿರೂಪಿಸಿ, ಹರಿಣಾಕ್ಷಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ದಿನಾಚರಣೆ

Suddi Udaya

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬೆಳಾಲು : ವಿಶ್ವವಿಕಲಚೇತನರ ದಿನಾಚರಣೆ ಹಾಗೂ ವಿಶೇಷ ಗ್ರಾಮ ಸಭೆ

Suddi Udaya

ಮೊಗ್ರು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಸಭೆ; ನೂತನ ಸಮಿತಿ ರಚನೆ

Suddi Udaya

ವಿ.ಹಿ.ಪ ಬಜರಂಗದಳ ಕಳೆಂಜ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya
error: Content is protected !!