July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆಯು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸೀತಾ ರವರ ಅಧ್ಯಕ್ಷತೆಯಲ್ಲಿ ಜರುಗಿತು.

ಪಂಚಾಯತ್ ಅಧ್ಯಕ್ಷೆ ಸವಿತಾ , ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಅಭಿವೃದ್ಧಿ ಅಧಿಕಾರಿ ಶ್ರೀಧರ ಹೆಗ್ಡೆ, ಕಾರ್ಯದರ್ಶಿ ನಿರ್ಮಲ್ ಕುಮಾರ್, ಪಂಚಾಯತ್ ಸದಸ್ಯರು ಹಾಗೂ ಒಕ್ಕೂಟದ ಎಲ್ಲಾ ಪದಾಧಿಕಾರಿಗಳು, ತಾಲೂಕು ಪಂಚಾಯತ್ ಸಂಯೋಜಕರಾದ ಜಯಾನಂದ, ಶ್ರೀ ಕಲಾ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

2024-25 ನೇ ಸಾಲಿನ ವರದಿಯನ್ನು ಮಲ್ಲಿಕಾ ಓದಿ ಮಂಡಿಸಿದರು. ತಾಲೂಕು ಸಂಯೋಜಕ ಜಯಾನಂದ ಪ್ರಾಸ್ತಾವಿಕ ಮಾತನಾಡಿ ಸಂಜೀವಿನಿ ಯೋಜನೆಯ ಬಗ್ಗೆ ಸದಸ್ಯರಿಗೆ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.

ಪಂಚಾಯತ್ ಅಧ್ಯಕ್ಷೆ ಸವಿತಾ ಸಂಜೀವಿನಿ ಯೋಜನೆಯಿಂದ ದೊರೆಯುವ ಸಾಲ ಸೌಲಭ್ಯ , ಸವಲತ್ತುಗಳನ್ನು ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟ ನೀಡುತ್ತಿದೆ ಎಂದು ಸಭೆಯಲ್ಲಿ ತಿಳಿಸಿದರು. ಉಪಾಧ್ಯಕ್ಷ ಲೋಕನಾಥ ಶೆಟ್ಟಿ ಮಾತನಾಡಿ ಸಂಜೀವಿನಿ ಯೋಜನೆಯಿಂದ ಮಹಿಳೆಯರು ಸ್ವಾವಲಂಬಿಯಾಗಿ ಜೀವನವನ್ನು ನಡೆಸುತ್ತಿದ್ದಾರೆ ಇವರಿಗೆ ಸ್ವ-ಉದ್ಯೋಗ ಮಾಡಲು ಒಕ್ಕೂಟವು ಪ್ರೇರಣೆಯನ್ನು ನೀಡುತ್ತಿದೆ ಎಂದು ಇದರ ಒಟ್ಟಿಗೆ ಪಂಚಾಯತ್ ಕೂಡ ಸಂಜೀವಿನಿ ಒಕ್ಕೂಟಕ್ಕೆ ಸಹಕಾರ ನೀಡುವುದಾಗಿ ತಿಳಿಸಿದರು.

ಕೃಷಿ ಸಖಿ ಸಮಲತಾ ಸ್ವಾಗತಿಸಿದರು. ಪಶುಶಖಿ ಗೀತಾ ಕಾರ್ಯಕ್ರಮ ನಿರೂಪಿಸಿ, ಹರಿಣಾಕ್ಷಿ ಧನ್ಯವಾದವಿತ್ತರು.

Related posts

ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿಯ ಸಂಚಾಲಕರಾಗಿ ಪ್ರವೀಣ್‌ ಫೆರ್ನಾಂಡಿಸ್

Suddi Udaya

ಬೆಳ್ತಂಗಡಿ : ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

Suddi Udaya

ಅಕ್ಟೋಬರ್ 2ರಂದು ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆಗೆ ನಿರ್ಧಾರ: ತಾ. ಜನಜಾಗೃತಿ ವೇದಿಕೆ ಸಭೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಮಾನ್ಸೂನ್ ಮೇನಿಯ 2023”

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರು ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಭೇಟಿ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya
error: Content is protected !!