ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಗುರುದೇವ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಪಕ್ಷಿ ವೀಕ್ಷಣೆ ಹಾಗೂ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ: ವನ್ಯಜೀವಿ ವಲಯ 71ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳು ಜಮಲಾಬಾದ್ ಕೋಟೆಯ ಪರಿಸರದಲ್ಲಿ ಪಕ್ಷಿ ವೀಕ್ಷಣೆ ಮತ್ತು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಬೆಳ್ತಂಗಡಿ ರೇಂಜ್ ಫಾರೆಸ್ಟ್ ಆಫೀಸರ್ ಶ್ರೀಮತಿ ಶರ್ಮಿಷ್ಟ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾರ್ಥಿಗಳಿಗೆ ವನ್ಯಜೀವಿಗಳ ಬದುಕು ಅಳಿವು ಮತ್ತು ಜೀವನಚಕ್ರದ ಬಗ್ಗೆ ಮತ್ತು ಅವುಗಳ ಸಂರಕ್ಷಣೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಮತ್ತು ಉಪ ಅರಣ್ಯ ಅಧಿಕಾರಿ ಮ್ಯಾಥ್ಯೂ ವಿದ್ಯಾರ್ಥಿಗಳಿಗೆ ಪಕ್ಷಿ ವೀಕ್ಷಣೆಯ ಮಹತ್ವವನ್ನ ವಿವರಿಸಿದರು. ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿಗಳಾದ ಬಿಎ ಶಮಿವುಲ್ಲಾ ಕಾರ್ಯಕ್ರಮದ ಸಂಪೂರ್ಣ ರೂಪರೇಷೆಯನ್ನ ವಿದ್ಯಾರ್ಥಿಗಳಿಗೆ ವಿವರಿಸಿ , ಕಾರ್ಯಕ್ರಮ ಸಂಪೂರ್ಣ ಸದುಪಯೋಗವನ್ನು ಪಡೆದುಕೊಳ್ಳುವಂತೆ ಹೇಳಿದರು.

ವಿದ್ಯಾರ್ಥಿಗಳು ಪಕ್ಷಿ ವೀಕ್ಷಣೆಯನ್ನು ಮಾಡಿ ವನ್ಯಪ್ರಾಣಿಗಳ ಬಗ್ಗೆ ತಮಗಿರುವ ಪ್ರಶ್ನೆಗಳನ್ನು ಕೇಳಿ ಪರಿಹರಿಸಿಕೊಂಡರು. ವಿದ್ಯಾರ್ಥಿಗಳು ಜಮಲಾಬಾದ್ ಪರಿಸರದ ಸುತ್ತಮುತ್ತ ಬಿದ್ದಿರುವ ಕಸ ಕಡ್ಡಿ ಪ್ಲಾಸ್ಟಿಕ್ ಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು. ಉಪವಲಯ ಅರಣ್ಯ ಅಧಿಕಾರಿ ರವೀಂದ್ರ ಸ್ವಾಗತಿಸಿದರು. ರಾ.ಸೇವಾ ಯೋಜನ ಘಟಕದ ನಾಯಕ ಆಶಿಕ್ ದ್ವಿತೀಯ ಬಿಕಾಂ ಧನ್ಯವಾದ ನೀಡಿದರು.

Related posts

ಪಟ್ರಮೆ ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಆಂದೋಲನ

Suddi Udaya

ಎ.13-23: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರೋತ್ಸವ       

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಪುತ್ತಿಲ ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಯಿಂದ ಮದೂರು ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ಭಜನಾ ಸೇವೆ

Suddi Udaya

ಮುಂಡಾಜೆ: ವಿದ್ಯುತ್ ಲೈನ್ ಮೇಲೆ ಬಿದ್ದ ಮರ: ಗುಡ್ಡಕ್ಕೆ ಬೆಂಕಿ

Suddi Udaya

ಶಿಲ್ಪಾ ಆಚಾರ್ಯ ಮನೆಗೆ ಭೇಟಿ ನೀಡಿದ ಡಿವೈಎಫ್ಐ ನಿಯೋಗ

Suddi Udaya
error: Content is protected !!