July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಕ್ಕೇಡಿ ಬುಳೆಕ್ಕರ ಶ್ರೀ ಶಾರದಾಂಭ ಭಜನಾ ಮಂಡಳಿ ಅಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ತೃಪ್ತಿ

ಕುಕ್ಕೇಡಿ: ಬುಳೆಕ್ಕರ ಶಾರದನಗರ ಶ್ರೀ ಶಾರದಾಂಭ ಭಜನಾ ಮಹಿಳಾ ಮಂಡಳಿ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆಯು ಭಜನಾ ಮಂದಿರದಲ್ಲಿ ನಡೆಯಿತು.

ಗ್ರಾಮ ಪಂಚಾಯಿತ್ ಸದಸ್ಯ ಹಾಗೂ ಮಂಡಳಿಯ ಕಾರ್ಯಾಧ್ಯಕ್ಷ ಗೋಪಾಲ ಶೆಟ್ಟಿ ಅಧ್ಯಕ್ಷತೆ ವಹಿಸಿದರು.

ವೇದಿಕೆಯಲ್ಲಿ ವಿಶ್ವನಾಥ್ ದೇವಾಡಿಗ, ನಾರಾಯಣ ನಾಯ್ಕ, ಮಹಿಳಾ ಸಮಿತಿ ಅಧ್ಯಕ್ಷೆ ಪವಿತ್ರ ಕಮಲಾಕ್ಷ ದರ್ಬೆ ಉಪಸ್ಥಿತರಿದ್ದರು. ಬಳಿಕ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಶಶಿಕಲಾ ಜಗದೀಶ್ ದರ್ಬೆ, ಕಾರ್ಯದರ್ಶಿಯಾಗಿ ತೃಪ್ತಿ ಕೆಂಗಾಜೆ, ಜೊತೆ ಕಾರ್ಯದರ್ಶಿಯಾಗಿ ಪೃಥ್ವಿ ವಿ. ಎಸ್. ದೇವಾಡಿಗ ಬುಳೆಕ್ಕಾರ, ಉಪಾಧ್ಯಕ್ಷರಾಗಿ ವಿನೋದ ರತ್ನಾಕರ್ ಪಾದೆ, ಸುನಂದ ಶಿವರಾಂ ಶೆಟ್ಟಿ ಪಾಪುದಡ್ಕ, ಮತ್ತು ಇತರ 25 ಮಹಿಳಾ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ನವೀನ್ ಜಿ. ಸ್ವಾಗತಿಸಿದರು, ಜಗದೀಶ್ ದರ್ಬೆ ಕಾರ್ಯಕ್ರಮ ನಿರೂಪಿಸಿದರು. ಪ್ರವೀಣ್ ಕೊಪ್ಪಳ ಧನ್ಯವಾದವಿತ್ತರು.

Related posts

ಎಸ್ ಡಿ ಎಮ್ ಬೆಳ್ತಂಗಡಿ ಶಾಲೆಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತರ ಭೇಟಿ

Suddi Udaya

ದ.ಕ ಸ.ಹಾ.ಉ. ಒಕ್ಕೂಟದ ಆಡಳಿತ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಸಿದ್ದಕಟ್ಟೆ ಕೃ.ಪ.ಸ. ಸಂಘದ ಆಡಳಿತ ಮಂಡಳಿಯಿಂದ ಸನ್ಮಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಮೆಸ್ಕಾಂನಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗೇಶ್ ಕುಲಾಲ್ ರಿಗೆ ಗೌರವಾರ್ಪಣೆ

Suddi Udaya

ಇಂದಬೆಟ್ಟು ಗ್ರಾ. ಪಂ.ವ್ಯಾಪ್ತಿಯ ಕಜೆ – ಶಾಂತಿನಗರ ಪರಿಸರದಲ್ಲಿ ಬಿರುಗಾಳಿಗೆ ವ್ಯಾಪಕ ಹಾನಿ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜು ದೈಹಿಕ ಶಿಕ್ಷಣ ವಿಭಾಗದಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ ಗ್ರಾ.ಪಂ. ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡ ನಿಧನ

Suddi Udaya
error: Content is protected !!