37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲೂಕು ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣ ಕುರಿತು ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣ ಕುರಿತು ವಿವಿಧ ಸಂಘ ಸಂಸ್ಥೆಗಳ ಮುಖಂಡರ ಜೊತೆ ಪೂರ್ವಭಾವಿ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಅ.14 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ವಿನೂತನ ರೀತಿಯಲ್ಲಿ ರಾಜ್ಯಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ಅಂದಾಜು 7 ಕೋಟಿ ರೂಪಾಯಿ ವೆಚ್ಚದ ಯೋಜನೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣವಾಗಲಿದೆ. ಈಗಾಗಲೇ ಕಟ್ಟಡ ನಿರ್ಮಾಣಕ್ಕೆ 3.60 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ. ಬೆಳ್ತಂಗಡಿ ತಾಲೂಕು ಕ್ರೀಡಾಂಗಣದ ಸ್ಥಳದಲ್ಲಿ 2.48 ಎಕ್ರೆ ಜಾಗದಲ್ಲಿ ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಾಣವಾಗಲಿದೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ರೆಂಕೆದಗುತ್ತು ಎಂಬಲ್ಲಿ ನೂತನ ತಾಲೂಕು ಕ್ರೀಡಾಂಗಣಕ್ಕೆ ಜಾಗ ಕಾಯ್ದಿರಿಸಿಲಾಗಿದೆ ಎಂದು ಶಾಸಕರು ತಿಳಿಸಿದರು.

ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ, ಉಪಾಧ್ಯಕ್ಷೆ ಗೌರಿ ಮತ್ತು ಸದಸ್ಯ ಅಂಬರೀಷ್ ಮತ್ತು ತಾಲೂಕು ಪಂಚಾಯತ್ ಇಓ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ಕಣಿಯೂರು ಜಿ. ಪಂ. ವ್ಯಾಪ್ತಿಯ ಮತದಾನ ಕೇಂದ್ರಕ್ಕೆ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಭೇಟಿ

Suddi Udaya

ಮೇ.31ಕ್ಕೆ ನಿವೃತ್ತರಾಗುತ್ತಿರುವ ಟೀಚರ್ಸ್ ಕೋಪರೇಟಿವ್ ಬ್ಯಾಂಕ್ ಮೆನೇಜರ್ ಲ| ರವೀಂದ್ರ ಶೆಟ್ಟಿ ಬಳಂಜ

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.): ಅಧ್ಯಕ್ಷರಾಗಿ ರಂಜನ್ ಜಿ. ಗೌಡ, ಉಪಾಧ್ಯಕ್ಷರಾಗಿ ಶಿವಕಾಂತ ಗೌಡ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್- ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆಯ ಸಭ್ಯಾ ಹೆಬ್ಬಾರ್ ಗೆ ಪಿಎಚ್ ಡಿ ಪದವಿ

Suddi Udaya

ಉಜಿರೆ ರುಡ್‌ ಸೆಟ್‌ ಸಂಸ್ಥೆಯಲ್ಲಿ ವಸ್ತ್ರ ವಿನ್ಯಾಸ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!