July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲೂಕು ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣ ಕುರಿತು ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣ ಕುರಿತು ವಿವಿಧ ಸಂಘ ಸಂಸ್ಥೆಗಳ ಮುಖಂಡರ ಜೊತೆ ಪೂರ್ವಭಾವಿ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಅ.14 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ವಿನೂತನ ರೀತಿಯಲ್ಲಿ ರಾಜ್ಯಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ಅಂದಾಜು 7 ಕೋಟಿ ರೂಪಾಯಿ ವೆಚ್ಚದ ಯೋಜನೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣವಾಗಲಿದೆ. ಈಗಾಗಲೇ ಕಟ್ಟಡ ನಿರ್ಮಾಣಕ್ಕೆ 3.60 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ. ಬೆಳ್ತಂಗಡಿ ತಾಲೂಕು ಕ್ರೀಡಾಂಗಣದ ಸ್ಥಳದಲ್ಲಿ 2.48 ಎಕ್ರೆ ಜಾಗದಲ್ಲಿ ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಾಣವಾಗಲಿದೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ರೆಂಕೆದಗುತ್ತು ಎಂಬಲ್ಲಿ ನೂತನ ತಾಲೂಕು ಕ್ರೀಡಾಂಗಣಕ್ಕೆ ಜಾಗ ಕಾಯ್ದಿರಿಸಿಲಾಗಿದೆ ಎಂದು ಶಾಸಕರು ತಿಳಿಸಿದರು.

ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ, ಉಪಾಧ್ಯಕ್ಷೆ ಗೌರಿ ಮತ್ತು ಸದಸ್ಯ ಅಂಬರೀಷ್ ಮತ್ತು ತಾಲೂಕು ಪಂಚಾಯತ್ ಇಓ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ಬಳಂಜ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಬ್ರಹ್ಮಶ್ರೀ ಮಂಡಳಿಯಿಂದ ಪೆನ್ನು ವಿತರಣೆ

Suddi Udaya

ಪಟ್ರಮೆ: ಅನಾರು ನಿವಾಸಿ ಭಾಸ್ಕರ ರಾವ್ ನಿಧನ

Suddi Udaya

ಉಜಿರೆ: ಬ್ರಹ್ಮೋಪದೇಶದಲ್ಲಿ ಶರಸೇತು ಬಂಧನ ತಾಳಮದ್ದಳೆ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 30 ನೇ ಸಹಾಯಧನ ಹಸ್ತಾಂತರ

Suddi Udaya

ಯಕ್ಷಗಾನ ಕಲಾವಿದ ರಮೇಶ್ ಶೆಟ್ಟಿ ಪೆರಿಂಜೆ ಅವರಿಗೆ ಸಿದ್ದಕಟ್ಟೆ ಯಕ್ಷ ಮಿತ್ರ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ

Suddi Udaya
error: Content is protected !!