September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆಯು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸೀತಾ ರವರ ಅಧ್ಯಕ್ಷತೆಯಲ್ಲಿ ಜರುಗಿತು.

ಪಂಚಾಯತ್ ಅಧ್ಯಕ್ಷೆ ಸವಿತಾ , ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಅಭಿವೃದ್ಧಿ ಅಧಿಕಾರಿ ಶ್ರೀಧರ ಹೆಗ್ಡೆ, ಕಾರ್ಯದರ್ಶಿ ನಿರ್ಮಲ್ ಕುಮಾರ್, ಪಂಚಾಯತ್ ಸದಸ್ಯರು ಹಾಗೂ ಒಕ್ಕೂಟದ ಎಲ್ಲಾ ಪದಾಧಿಕಾರಿಗಳು, ತಾಲೂಕು ಪಂಚಾಯತ್ ಸಂಯೋಜಕರಾದ ಜಯಾನಂದ, ಶ್ರೀ ಕಲಾ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

2024-25 ನೇ ಸಾಲಿನ ವರದಿಯನ್ನು ಮಲ್ಲಿಕಾ ಓದಿ ಮಂಡಿಸಿದರು. ತಾಲೂಕು ಸಂಯೋಜಕ ಜಯಾನಂದ ಪ್ರಾಸ್ತಾವಿಕ ಮಾತನಾಡಿ ಸಂಜೀವಿನಿ ಯೋಜನೆಯ ಬಗ್ಗೆ ಸದಸ್ಯರಿಗೆ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.

ಪಂಚಾಯತ್ ಅಧ್ಯಕ್ಷೆ ಸವಿತಾ ಸಂಜೀವಿನಿ ಯೋಜನೆಯಿಂದ ದೊರೆಯುವ ಸಾಲ ಸೌಲಭ್ಯ , ಸವಲತ್ತುಗಳನ್ನು ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟ ನೀಡುತ್ತಿದೆ ಎಂದು ಸಭೆಯಲ್ಲಿ ತಿಳಿಸಿದರು. ಉಪಾಧ್ಯಕ್ಷ ಲೋಕನಾಥ ಶೆಟ್ಟಿ ಮಾತನಾಡಿ ಸಂಜೀವಿನಿ ಯೋಜನೆಯಿಂದ ಮಹಿಳೆಯರು ಸ್ವಾವಲಂಬಿಯಾಗಿ ಜೀವನವನ್ನು ನಡೆಸುತ್ತಿದ್ದಾರೆ ಇವರಿಗೆ ಸ್ವ-ಉದ್ಯೋಗ ಮಾಡಲು ಒಕ್ಕೂಟವು ಪ್ರೇರಣೆಯನ್ನು ನೀಡುತ್ತಿದೆ ಎಂದು ಇದರ ಒಟ್ಟಿಗೆ ಪಂಚಾಯತ್ ಕೂಡ ಸಂಜೀವಿನಿ ಒಕ್ಕೂಟಕ್ಕೆ ಸಹಕಾರ ನೀಡುವುದಾಗಿ ತಿಳಿಸಿದರು.

ಕೃಷಿ ಸಖಿ ಸಮಲತಾ ಸ್ವಾಗತಿಸಿದರು. ಪಶುಶಖಿ ಗೀತಾ ಕಾರ್ಯಕ್ರಮ ನಿರೂಪಿಸಿ, ಹರಿಣಾಕ್ಷಿ ಧನ್ಯವಾದವಿತ್ತರು.

Related posts

ನ.28: ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಶಿಬಾಜೆಯಲ್ಲಿ ದಲಿತ ಯುವಕನ ಹತ್ಯೆ ಆರೋಪ ಪ್ರಕರಣ: ಆರೋಪಿಗಳನ್ನು ಬಂಧಿಸುವಂತೆ ದಲಿತ ಸಂಘಟನೆಯಿಂದ ಒತ್ತಾಯ

Suddi Udaya

ಲೋಕೋಪಯೋಗಿ ಸಚಿವ ಜಾರಕಿಹೊಳಿ ಇಂದು ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಕಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ಅನುದಾನದಿಂದ ಅಳವಡಿಸಿದ ಸೋಲಾರ್ ಲೈಟ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ : ಸಂತೆಕಟ್ಟೆ ಬಳಿ ಖಾಸಗಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು

Suddi Udaya

ಗೇರುಕಟ್ಟೆ: ಕೃಷಿಕ ಪೆರಾಜೆ ಬಳ್ಳಿದಡ್ಡ ಕಾಂ ತಪ್ಪ ಗೌಡ ನಿಧನ

Suddi Udaya
error: Content is protected !!