ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಕ್ಕೇಡಿ ಬುಳೆಕ್ಕರ ಶ್ರೀ ಶಾರದಾಂಭ ಭಜನಾ ಮಂಡಳಿ ಅಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ತೃಪ್ತಿ

ಕುಕ್ಕೇಡಿ: ಬುಳೆಕ್ಕರ ಶಾರದನಗರ ಶ್ರೀ ಶಾರದಾಂಭ ಭಜನಾ ಮಹಿಳಾ ಮಂಡಳಿ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆಯು ಭಜನಾ ಮಂದಿರದಲ್ಲಿ ನಡೆಯಿತು.

ಗ್ರಾಮ ಪಂಚಾಯಿತ್ ಸದಸ್ಯ ಹಾಗೂ ಮಂಡಳಿಯ ಕಾರ್ಯಾಧ್ಯಕ್ಷ ಗೋಪಾಲ ಶೆಟ್ಟಿ ಅಧ್ಯಕ್ಷತೆ ವಹಿಸಿದರು.

ವೇದಿಕೆಯಲ್ಲಿ ವಿಶ್ವನಾಥ್ ದೇವಾಡಿಗ, ನಾರಾಯಣ ನಾಯ್ಕ, ಮಹಿಳಾ ಸಮಿತಿ ಅಧ್ಯಕ್ಷೆ ಪವಿತ್ರ ಕಮಲಾಕ್ಷ ದರ್ಬೆ ಉಪಸ್ಥಿತರಿದ್ದರು. ಬಳಿಕ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಶಶಿಕಲಾ ಜಗದೀಶ್ ದರ್ಬೆ, ಕಾರ್ಯದರ್ಶಿಯಾಗಿ ತೃಪ್ತಿ ಕೆಂಗಾಜೆ, ಜೊತೆ ಕಾರ್ಯದರ್ಶಿಯಾಗಿ ಪೃಥ್ವಿ ವಿ. ಎಸ್. ದೇವಾಡಿಗ ಬುಳೆಕ್ಕಾರ, ಉಪಾಧ್ಯಕ್ಷರಾಗಿ ವಿನೋದ ರತ್ನಾಕರ್ ಪಾದೆ, ಸುನಂದ ಶಿವರಾಂ ಶೆಟ್ಟಿ ಪಾಪುದಡ್ಕ, ಮತ್ತು ಇತರ 25 ಮಹಿಳಾ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ನವೀನ್ ಜಿ. ಸ್ವಾಗತಿಸಿದರು, ಜಗದೀಶ್ ದರ್ಬೆ ಕಾರ್ಯಕ್ರಮ ನಿರೂಪಿಸಿದರು. ಪ್ರವೀಣ್ ಕೊಪ್ಪಳ ಧನ್ಯವಾದವಿತ್ತರು.

Related posts

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಕೆಸರು ಕಂಡೊಡು ಗೌಡೆರೆ ಗೌಜಿ-ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ಪಾಲಡ್ಕ ಒಕ್ಕೂಟದ ಬೆಳ್ಳಿ ಹಬ್ಬ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾ.ಪಂ. ನಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವದ ಪೂರ್ವ ತಯಾರಿ ಸಭೆ

Suddi Udaya

ಬೆಳ್ತಂಗಡಿ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಗ್ರಾಹಕರ ಸಭೆ

Suddi Udaya
error: Content is protected !!