September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಟ್ರಯಥ್ಲಾನ್ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ ಶಿಪ್‌: ಪಡಂಗಡಿಯ ಕುವರಿ ಅದ್ವಿಕಾ ಕೆಪಿ ಯವರಿಗೆ ಕಂಚಿನ ಪ್ರಶಸ್ತಿ

ಬೆಳ್ತಂಗಡಿ: ಒಡಿಶಾದ ಭುಭನೇಶ್ವರ ಕಳಿಂಗ ಕ್ರೀಡಾಂಗಣದಲ್ಲಿ ಅ.10ರಿಂದ 14ರವರೆಗೆ ನಡೆದ 40ನೇ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ ಶಿಪ್‌ 2025 ರಲ್ಲಿ ಟ್ರಯಥ್ಲಾನ್ ಬಿ ವಿಭಾಗದಲ್ಲಿ 2739 ಅಂಕಗಳನ್ನು ಪಡೆದ ಕರ್ನಾಟಕದ ಅದ್ವಿಕಾ ಕೆಪಿ ಕಂಚಿನ ಪದಕವನ್ನು ಜಯಿಸಿದ್ದಾರೆ.

ಜೊತೆಗೆ ಉಡುಪಿಯಲ್ಲಿ ನಡೆದ ರಾಜ್ಯಮಟ್ಟದ ಜೂನಿಯರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 14 ವಯೋಮಾನದ ಟ್ರಯಥ್ಲಾನ್ ಬಿ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಇವರು ಮಂಗಳ ಕ್ರೀಡಾಂಗಣದ ಮಂಗಳ ಅಥ್ಲೆಟಿಕ್ ಕ್ಲಬ್ ನಲ್ಲಿ ಅಂತರರಾಷ್ಟ್ರೀಯ ಕೋಚ್ ದಿನೇಶ್ ಕುಂದರ್ ರವರಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ. ಮೂಲತಃ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದವರಾಗಿದ್ದು ಪ್ರಸ್ತುತ ಮಂಗಳೂರಿನಲ್ಲಿ ನೆಲೆಸಿದ್ದಾರೆ. ಇವರು ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಡಾ. ಅರುಣ್ ಕೆಪಿ ಮತ್ತು ಗೀತಾ ದಂಪತಿಯ ಸುಪುತ್ರಿಯಾಗಿದ್ದು, ಸೈಂಟ್ ಆಗ್ನೆಸ್ ಸಿಬಿಎಸ್ಸಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

Related posts

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ: ಅವೈದಿಕ ಪರಂಪರೆಯ ದೈವರಾಧನೆ ಹಾಗೂ ದೈವರಾಧನೆಯಲ್ಲಿ ಬಂಟರು-ಚರ್ಚಾಗೋಷ್ಠಿ

Suddi Udaya

ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಸ್ಪರ್ಧಿಸುವ ಅಪೇಕ್ಷೆ: ಪತ್ರಿಕಾಗೋಷ್ಠಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ಮುಗೇರಡ್ಕ ಮೊಗ್ರು ಯುವ ವೇದಿಕೆ ವತಿಯಿಂದ ವಿದ್ಯಾನಿಧಿಗೆ ದೇಣಿಗೆ ಹಸ್ತಾಂತರ

Suddi Udaya

ಕಬ್ಬಡಿ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಾಜಿ ಡೆಲ್ಲಿ ಯಲ್ಲಿ ಮಾಸ್ಟರ್ ಆಫ್ ಡಿಸೈನ್ ಪದವಿ ಪಡೆದ ತೆಂಕಕಾರಂದೂರುವಿನ ಅಜಿತ್ ಕುಮಾರ್

Suddi Udaya
error: Content is protected !!