July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶದಲ್ಲಿ ಲೋಪವಾಗಿಲ್ಲ: ರಾಜ್ಯ ಸರಕಾರ ಸಮರ್ಥನೆ

ಬೆಳ್ತಂಗಡಿ: ಸೌಜನ್ಯಾ ಸಾವಿಗೆ ನ್ಯಾಯ ದೊರಕಿಸಲು ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡೀಪಾರು ಮಾಡಿ ಹೊರಡಿಸಿರುವ ಆದೇಶದಲ್ಲಿ ಕಾನೂನು ಪ್ರಕ್ರಿಯೆ ಲೋಪವೂ ಆಗಿಲ್ಲ; ಸಹಜ ನ್ಯಾಯ ತತ್ವದ ಉಲ್ಲಂಘನೆಯೂ ಆಗಿಲ್ಲ ಎಂದು ರಾಜ್ಯ ಸರಕಾರ ಸಮರ್ಥಿಸಿಕೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ರಾಯಚೂರು ಜಿಲ್ಲೆ ಮಾನ್ವಿಗೆ ಗಡೀಪಾರು ಮಾಡಿ ಹೊರಡಿಸಲಾಗಿರುವ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಅ.13ರಂದು ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ತಾರಾನಾಥ ಪೂಜಾರಿ, ಗಡಿಪಾರು ಆದೇಶದಲ್ಲಿ ಒಂದಲ್ಲ, ಹತ್ತಾರು ಕಾನೂನು ಪ್ರಕ್ರಿಯೆಯ ಲೋಪಗಳಿವೆ. ಇಡೀ ಸರಕಾರ ಮತ್ತು ಗೃಹ ಇಲಾಖೆ ತಿಮರೋಡಿ ವಿರುದ್ಧ ನಿಂತಿದೆ. ತಿಮರೋಡಿ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಕುರಿತು ಯಾವುದೇ ವಿವರಗಳನ್ನು ಒದಗಿಸಲಾಗಿಲ್ಲ. ಈಗಾಗಲೇ ಸುಮಾರು 10 ಪ್ರಕರಣಗಳಲ್ಲಿ ಖುಲಾಸೆ ಆಗಿದ್ದು, ಎರಡು ಪ್ರಕರಣಗಳಲ್ಲಿ ಬಿ ರಿಪೋರ್ಟ್ ಸಲ್ಲಿಕೆಯಾಗಿದೆ. ಲೋಕಸಭೆ ಚುನಾವಣೆ ವೇಳೆ ಗಲಭೆ ಎಬ್ಬಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಆದರೆ, ಅದಕ್ಕೆ ಸಾಕ್ಷಿ ಕೊಟ್ಟಿಲ್ಲ. ಇವರ ಹೆದರಿಕೆಯಿಂದ ಸಾಕ್ಷಿಗಳು ಮುಂದೆ ಬರುವುದಿಲ್ಲ ಎಂದೆಲ್ಲ ಹೇಳಲಾಗಿದೆ. ಆದರೆ ಇದೆಲ್ಲವೂ ಸುಳ್ಳು ಎಂದರು. ಇದಕ್ಕೆ ಬಲವಾಗಿ ಆಕ್ಷೇಪಿಸಿದ ಅಡ್ವಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ತಿಮರೋಡಿ ಪರ ವಕೀಲರು ನ್ಯಾಯಾಲಯಕ್ಕೆ ಹೇಳುತ್ತಿರುವ ವಿವರಗಳು ಸರಿಯಲ್ಲ. ಸ್ಥಳೀಯ ನಿವಾಸಿಯಾಗಿರುವ ಮಹೇಶ್ ಶೆಟ್ಟಿ ತಿಮರೋಡಿ ಸೌಜನ್ಯಾ ಚಳವಳಿ ಹೆಸರಲ್ಲಿ ಏನು ಮಾಡುತ್ತಿದ್ದಾರೆ ಎಂಬುದು ಜನರಿಗೆ ಗೊತ್ತಿದೆ. ಸರಕಾರ ಸಹಜ ನ್ಯಾಯ ತತ್ವಕ್ಕೆ ವಿರುದ್ಧವಾಗಿ ನಡೆದುಕೊಂಡಿಲ್ಲ. ಅಲ್ಲದೇ ಅವರನ್ನು ಗಡೀಪಾರು ಮಾಡಿ ಹೊರಡಿಸಿದ ಆದೇಶದಲ್ಲಿ ಕಾನೂನು ಪ್ರಕ್ರಿಯೆಯ ಯಾವ ಲೋಪವೂ ಆಗಿಲ್ಲ ಎಂದು ವಿವರಿಸಿದರು. ಸುದೀರ್ಘ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ಆದೇಶ ಕಾಯ್ದಿರಿಸಿರುವುದಾಗಿ ತಿಳಿಸಿತು. ಅಲ್ಲದೆ, ಗಡಿಪಾರು ಆದೇಶಕ್ಕೆ ಸಂಬಂಧಿಸಿದಂತೆ ತಿಮರೋಡಿ ವಿರುದ್ಧ ಆತುರದ ಕ್ರಮ ಜರುಗಿಸದಂತೆ ಈ ಹಿಂದೆ ಹೊರಡಿಸಿದ್ದ ಮಧ್ಯಾಂತರ ಆದೇಶವನ್ನು ವಿಸ್ತರಿಸಿತು.

Related posts

ದೈವ ಕ್ಷೇತ್ರ ಬಡೆಕ್ಕಾವು ಗುತ್ತುವಿನಲ್ಲಿ ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ: ಜೋಡು ಜೀಟಿಗೆ ನಾಟಕ ಪ್ರದರ್ಶನ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ್ದ ರಘುಪತಿ. ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮಚ್ಚಿನ: ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya

ವೇಣೂರು : ವಿದ್ಯುತ್ ತಂತಿ ತಗುಲಿ ಮೂರು ದನಗಳು ಸಾವು

Suddi Udaya

ನಿರಂತರ ಮಳೆ: ಮದ್ದಡ್ಕ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ರಸ್ತೆಯಲ್ಲೇ ಹರಿದ ನೀರು

Suddi Udaya

ಮೇಲಂತಬೆಟ್ಟು : ಮೇಯಲು ಬಿಟ್ಟ ರೂ.10 ಸಾವಿರ ಮೌಲ್ಯದ ಹಸು ಕಳವು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!