ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆಯು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸೀತಾ ರವರ ಅಧ್ಯಕ್ಷತೆಯಲ್ಲಿ ಜರುಗಿತು.
ಪಂಚಾಯತ್ ಅಧ್ಯಕ್ಷೆ ಸವಿತಾ , ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಅಭಿವೃದ್ಧಿ ಅಧಿಕಾರಿ ಶ್ರೀಧರ ಹೆಗ್ಡೆ, ಕಾರ್ಯದರ್ಶಿ ನಿರ್ಮಲ್ ಕುಮಾರ್, ಪಂಚಾಯತ್ ಸದಸ್ಯರು ಹಾಗೂ ಒಕ್ಕೂಟದ ಎಲ್ಲಾ ಪದಾಧಿಕಾರಿಗಳು, ತಾಲೂಕು ಪಂಚಾಯತ್ ಸಂಯೋಜಕರಾದ ಜಯಾನಂದ, ಶ್ರೀ ಕಲಾ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
2024-25 ನೇ ಸಾಲಿನ ವರದಿಯನ್ನು ಮಲ್ಲಿಕಾ ಓದಿ ಮಂಡಿಸಿದರು. ತಾಲೂಕು ಸಂಯೋಜಕ ಜಯಾನಂದ ಪ್ರಾಸ್ತಾವಿಕ ಮಾತನಾಡಿ ಸಂಜೀವಿನಿ ಯೋಜನೆಯ ಬಗ್ಗೆ ಸದಸ್ಯರಿಗೆ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.
ಪಂಚಾಯತ್ ಅಧ್ಯಕ್ಷೆ ಸವಿತಾ ಸಂಜೀವಿನಿ ಯೋಜನೆಯಿಂದ ದೊರೆಯುವ ಸಾಲ ಸೌಲಭ್ಯ , ಸವಲತ್ತುಗಳನ್ನು ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟ ನೀಡುತ್ತಿದೆ ಎಂದು ಸಭೆಯಲ್ಲಿ ತಿಳಿಸಿದರು. ಉಪಾಧ್ಯಕ್ಷ ಲೋಕನಾಥ ಶೆಟ್ಟಿ ಮಾತನಾಡಿ ಸಂಜೀವಿನಿ ಯೋಜನೆಯಿಂದ ಮಹಿಳೆಯರು ಸ್ವಾವಲಂಬಿಯಾಗಿ ಜೀವನವನ್ನು ನಡೆಸುತ್ತಿದ್ದಾರೆ ಇವರಿಗೆ ಸ್ವ-ಉದ್ಯೋಗ ಮಾಡಲು ಒಕ್ಕೂಟವು ಪ್ರೇರಣೆಯನ್ನು ನೀಡುತ್ತಿದೆ ಎಂದು ಇದರ ಒಟ್ಟಿಗೆ ಪಂಚಾಯತ್ ಕೂಡ ಸಂಜೀವಿನಿ ಒಕ್ಕೂಟಕ್ಕೆ ಸಹಕಾರ ನೀಡುವುದಾಗಿ ತಿಳಿಸಿದರು.
ಕೃಷಿ ಸಖಿ ಸಮಲತಾ ಸ್ವಾಗತಿಸಿದರು. ಪಶುಶಖಿ ಗೀತಾ ಕಾರ್ಯಕ್ರಮ ನಿರೂಪಿಸಿ, ಹರಿಣಾಕ್ಷಿ ಧನ್ಯವಾದವಿತ್ತರು.











