23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ನವಧ್ವನಿ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವೆಬ್ ಸೈಟ್ ಲೋಕಾರ್ಪಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರದಲ್ಲಿ ನವಧ್ವನಿ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವೆಬ್ ಸೈಟ್ ಅ.14 ರಂದು ಲೋಕಾರ್ಪಣೆಗೊಳಿಸಿ ಶುಭ ಕೋರಿದರು.

ಭಾರತ ಸರಕಾರದ ಕಂಪೆನಿ ಸ್ ಆಕ್ಸ್ ನಲ್ಲಿ ಮಾನ್ಯತೆ ಪಡೆದು ಪ್ರಾರಂಭಗೊಂಡ ಸಂಸ್ಥೆ ಇದಾಗಲೇ ದಾವಣಗೆರೆ ಮತ್ತು ಬೆಳ್ತಂಗಡಿಯಲ್ಲಿ ಶಾಖೆ ಹೊಂದಿದೆ. ಈ ಸಂಸ್ಥೆಯ ಉದ್ದೇಶ – ಆರ್ಥಿಕ, ಕಾನೂನು, ಲೈಸನ್ನಿಂಗ್ ಮತ್ತು ಆಡಳಿತ ಸಲಹೆಗಳನ್ನು ಒಂದೇ ವೇದಿಕೆಯ ಮೇಲೆ ಒದಗಿಸುವುದು. ನವಧ್ವನಿ ಕನ್ಸಲ್ಟಿಂಗ್ ಗ್ರಾಹಕರಿಗೆ ಪಾರದರ್ಶಕತೆ, ನೈತಿಕತೆ ಮತ್ತು ತಂತ್ರಜ್ಞಾನ ಆಧಾರಿತ ಸೇವೆ ನೀಡುವ ನಂಬಿಕಾರ್ಹ ಸಂಸ್ಥೆಗಳಲ್ಲಿ ಒಂದಾಗಬೇಕೆಂಬ ಆಶಯದೊಂದಿಗೆ ಸಂಸ್ಥೆಯನ್ನು ಪ್ರಾರಂಭಿಸಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥರು ತಿಳಿಸಿದರು.

ಮ್ಯಾನೇಜಿಂಗ್ ಡೈರೆಕ್ಟರ್ ವಿನಯ ಕುಮಾರ್ ಪಿ. ಎಸ್,ಚಾರ್ಟಡ್ ಅಕೌಂಟೆಂಟ್ ಮತ್ತು ಕಂಪೆನಿ ಸೇಕ್ರೆಟರಿ ಗಾಯತ್ರಿ ರಾವ್, ಡೈರೆಕ್ಟರ್ ಗಳಾದ ಶ್ರೀಮತಿ ನಾಗ ನಂದಿನಿ ಪಿ.ಎನ್., ಶ್ರೀಮತಿ ಚೈತ್ರ ಟಿ, ಆದಿತ್ಯ.ಎಸ್. ರಾವ್, ಚೇತನ್ ಜಿ. ಎಮ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಕಡಬದ ನವ ಜೀವನ ಸದಸ್ಯರಿಂದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರ ಭೇಟಿ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನೆರಿಯ: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಮನೆ ಸಂಪೂರ್ಣ ಹಾನಿ

Suddi Udaya

ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಗ್ರಾಹಕರ ಸಭೆ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸೌಜನ್ಯ ಕೊಲೆ ಪ್ರಕರಣ: ಕಾನತ್ತೂರು ಕ್ಷೇತ್ರದಲ್ಲಿ ಪ್ರಮಾಣ ಪೂರೈಸಿದ ಧೀರಜ್ ಜೈನ್, ಮಲ್ಲಿಕ್ ಜೈನ್, ಉದಯ್ ಜೈನ್

Suddi Udaya
error: Content is protected !!