25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಗುರುದೇವ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಪಕ್ಷಿ ವೀಕ್ಷಣೆ ಹಾಗೂ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ: ವನ್ಯಜೀವಿ ವಲಯ 71ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳು ಜಮಲಾಬಾದ್ ಕೋಟೆಯ ಪರಿಸರದಲ್ಲಿ ಪಕ್ಷಿ ವೀಕ್ಷಣೆ ಮತ್ತು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಬೆಳ್ತಂಗಡಿ ರೇಂಜ್ ಫಾರೆಸ್ಟ್ ಆಫೀಸರ್ ಶ್ರೀಮತಿ ಶರ್ಮಿಷ್ಟ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾರ್ಥಿಗಳಿಗೆ ವನ್ಯಜೀವಿಗಳ ಬದುಕು ಅಳಿವು ಮತ್ತು ಜೀವನಚಕ್ರದ ಬಗ್ಗೆ ಮತ್ತು ಅವುಗಳ ಸಂರಕ್ಷಣೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಮತ್ತು ಉಪ ಅರಣ್ಯ ಅಧಿಕಾರಿ ಮ್ಯಾಥ್ಯೂ ವಿದ್ಯಾರ್ಥಿಗಳಿಗೆ ಪಕ್ಷಿ ವೀಕ್ಷಣೆಯ ಮಹತ್ವವನ್ನ ವಿವರಿಸಿದರು. ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿಗಳಾದ ಬಿಎ ಶಮಿವುಲ್ಲಾ ಕಾರ್ಯಕ್ರಮದ ಸಂಪೂರ್ಣ ರೂಪರೇಷೆಯನ್ನ ವಿದ್ಯಾರ್ಥಿಗಳಿಗೆ ವಿವರಿಸಿ , ಕಾರ್ಯಕ್ರಮ ಸಂಪೂರ್ಣ ಸದುಪಯೋಗವನ್ನು ಪಡೆದುಕೊಳ್ಳುವಂತೆ ಹೇಳಿದರು.

ವಿದ್ಯಾರ್ಥಿಗಳು ಪಕ್ಷಿ ವೀಕ್ಷಣೆಯನ್ನು ಮಾಡಿ ವನ್ಯಪ್ರಾಣಿಗಳ ಬಗ್ಗೆ ತಮಗಿರುವ ಪ್ರಶ್ನೆಗಳನ್ನು ಕೇಳಿ ಪರಿಹರಿಸಿಕೊಂಡರು. ವಿದ್ಯಾರ್ಥಿಗಳು ಜಮಲಾಬಾದ್ ಪರಿಸರದ ಸುತ್ತಮುತ್ತ ಬಿದ್ದಿರುವ ಕಸ ಕಡ್ಡಿ ಪ್ಲಾಸ್ಟಿಕ್ ಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು. ಉಪವಲಯ ಅರಣ್ಯ ಅಧಿಕಾರಿ ರವೀಂದ್ರ ಸ್ವಾಗತಿಸಿದರು. ರಾ.ಸೇವಾ ಯೋಜನ ಘಟಕದ ನಾಯಕ ಆಶಿಕ್ ದ್ವಿತೀಯ ಬಿಕಾಂ ಧನ್ಯವಾದ ನೀಡಿದರು.

Related posts

ಅಶ್ವಮೇಧ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಕುವೆಟ್ಟು: ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಭಾರತೀಯ ಸೇನೆಗೆ ನೇಮಕಗೊಂಡಿರುವ ಬಳಂಜದ ಯುವಕ ಮನೋಹರ್ ಪೂಜಾರಿಯವರಿಗೆ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗೌರವಾರ್ಪಣೆ

Suddi Udaya

ಉಜಿರೆ ಹೆದ್ದಾರಿಯಲ್ಲಿ ತೆರೆದ ಚರಂಡಿಗಳು: ಸುದ್ದಿ ಉದಯ ಜನಧ್ವನಿ

Suddi Udaya
error: Content is protected !!