July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮ ಕುರಿತು ಮಾಹಿತಿ ಕಾರ್ಯಕ್ರಮ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ‘ಹೆಗ್ಗಡೆ’ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ (ಅ.24) ಪ್ರಯುಕ್ತ, ಅವರ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳ ಕುರಿತ ವಿಶೇಷ ಮಾಹಿತಿ ಕಾರ್ಯಕ್ರಮ ಉಜಿರೆಯ ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಅ.13ರಂದು ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಎಸ್.ಕೆ.ಡಿ.ಆರ್.ಡಿ.ಪಿ.) ಯ ಸಾರ್ವಜನಿಕ ಸಂಪರ್ಕಾಧಿಕಾರಿ ದುಗ್ಗಪ್ಪ ಗೌಡ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.


ಅಣ್ಣಪ್ಪ ದೈವ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ರೀತಿ ಹಾಗೂ ಶ್ರೀ ಮಂಜುನಾಥ ಸ್ವಾಮಿಯನ್ನು ಕದ್ರಿ ಕ್ಷೇತ್ರದಿಂದ ಕರೆದುಕೊಂಡು ಬಂದ ಕಾರಣ ಸಹಿತ ಕ್ಷೇತ್ರದ ಹಿನ್ನೆಲೆ, ಇತಿಹಾಸ ತಿಳಿಸಿದರು. ಧರ್ಮಸ್ಥಳದ ಕಾರ್ಯಕ್ಷೇತ್ರ ಕುರಿತು ಹಾಗೂ ಖಾವಂದರು ಕೈಗೊಂಡ ವಿವಿಧ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮ ಕುರಿತು ವಿವರಿಸಿದರು.


ಕಾರ್ಯಕ್ರಮದಲ್ಲಿ ಉಜಿರೆ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ದಿವಾಕರ ಕೆ. ಅವರು, ಖಾವಂದರ ಶೈಕ್ಷಣಿಕ ಕಾರ್ಯಕ್ರಮ ಕುರಿತು ಮಾತನಾಡಿದರು.
ಶಿಕ್ಷಣಕ್ಕೆ ಖಾವಂದರ ಕೊಡುಗೆ, ಪ್ರೋತ್ಸಾಹ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಆರಂಭ ಹಾಗೂ ಬೆಳೆದು ಬಂದ ರೀತಿ, ಗ್ರಾಮೀಣ ಪ್ರದೇಶದ ಜನರಿಗೆ ಇದರ ಪ್ರಯೋಜನ, ಮೂಲಭೂತ ಸೌಕರ್ಯ, ಗುಣಮಟ್ಟ ಹಾಗೂ ಕಡಿಮೆ ಶುಲ್ಕದೊಂದಿಗೆ ಶಿಕ್ಷಣ ನೀಡುತ್ತಿರುವ ಕಾರಣ, ವಿದ್ಯಾರ್ಥಿವೇತನ ಇತ್ಯಾದಿ ವಿಚಾರ ಕುರಿತು ಮಾಹಿತಿ ನೀಡಿದರು.


ಇದಕ್ಕೂ ಮೊದಲು, ವಿದ್ಯಾರ್ಥಿನಿಯರಿಗೆ ಆಯೋಜಿಸಿದ ‘ಶಿಕ್ಷಣಕ್ಕೆ ಪೂಜ್ಯರು ನೀಡಿರುವ ಕೊಡುಗೆಗಳು (ಪರ); ಶೈಕ್ಷಣಿಕ ಪಕ್ಷಪಾತ ಮತ್ತು ಉಪದೇಶ (ವಿರುದ್ಧ)’ ಚರ್ಚಾಸ್ಪರ್ಧೆಯಲ್ಲಿ ತೀರ್ಪುಗಾರರಾಗಿ ಅವರು ಭಾಗವಹಿಸಿದರು.
ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ. ಮಹಿಳಾ ಐಟಿಐ ಪ್ರಾಚಾರ್ಯ ವಿ. ಪ್ರಕಾಶ್ ಕಾಮತ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಬೋಧಕ ವರ್ಗ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Related posts

ಬಂದಾರು: ಶ್ರೀಧರ ಪೂಜಾರಿಯವರ ಮನೆಯ ಹಿಂಬದಿಯ ಗುಡ್ಡ ಕುಸಿತ

Suddi Udaya

ಪುದುವೆಟ್ಟು ಶಾಲೆಯಲ್ಲಿ ವಿಜ್ಞಾನ ಮಾದರಿಗಳ ತಯಾರಿಕಾ ಕಾರ್ಯಗಾರ

Suddi Udaya

ಕೊಕ್ಕಡ: ಮುಂಡೂರುಪಳಿಕೆ ಸ.ಕಿ.ಪ್ರಾ. ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಶ್ರೀ ಧ ಮಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾ ವಿದ್ಯಾ ನಿಲಯದಲ್ಲಿ ವಿಶ್ವ ಧ್ಯಾನ ದಿನಾಚರಣೆ

Suddi Udaya

ಮೇ 28: ಕೊಕ್ಕಡದಲ್ಲಿ ಜೇಸಿ ವಲಯ 15 ರ ವಲಯಾಡಳಿತ ಸಭೆ

Suddi Udaya

ಅತ್ಯುತ್ತಮ ಪ್ರವಾಸಿ ತಾಣಗಳ ಸ್ಪರ್ಧೆಯಲ್ಲಿ ಕುತ್ಲೂರಿನ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ರವರಿಗೆ ಪ್ರಶಸ್ತಿ: ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಗೌರರ್ವಾಪಣೆ

Suddi Udaya
error: Content is protected !!