July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಭಾರಿ ಮಳೆಗೆ ಕುಸಿದ ಮೋರಿ: ಗುಂಡ ದೈವಸ್ಥಾನದ ಸಂಪರ್ಕ ಕಡಿತ

ಮುಂಡಾಜೆ : ಇಲ್ಲಿಯ ಗುಂಡ ಶ್ರೀ ಮೂರ್ತಿಲ್ಲಾಯ ದೈವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮೋರಿ ಕುಸಿದು ಬಿದ್ದು ಸಂಪರ್ಕ ಕಡಿತಗೊಂಡ ಘಟನೆ ಅ.14ರಂದು ನಡೆದಿದೆ.


ಈ ಹಿಂದೆ ಭಾಗಶಃ ಕುಸಿತ ಕಂಡಿದ್ದ ಮೋರಿ ಮಂಗಳವಾರ ಸಂಜೆ ಸುರಿದ ಭಾರಿ ಮಳೆಗೆ ಸಂಪೂರ್ಣ ಕುಸಿದು ಬಿದ್ದಿದೆ.ಇದರಿಂದ ದೈವಸ್ಥಾನ ಸಹಿತ ಇಲ್ಲಿನ ನಾಲ್ಕಾರು ಮನೆಗಳಿಗೆ ಸಂಪರ್ಕ ಇಲ್ಲದಂತಾಗಿದೆ. ಸ್ಥಳೀಯರು ಪಕ್ಕದ ತೋಟಗಳಲ್ಲಿ ಸುತ್ತುಬಳಸಿನ ದಾರಿಯಲ್ಲಿ ನಡೆದುಕೊಂಡು ಹೋಗುವಂತಾಗಿದೆ.


ಈ ಹಿಂದೆ ಮಳೆಗಾಲದಲ್ಲಿ ಈ ಮೋರಿ ಕುಸಿತ ಕಾಣತೊಡಗಿತ್ತು. ಈ ಸಮಯ ಇದರ ದುರಸ್ತಿಗೆ ಮುಂಡಾಜೆ ಗ್ರಾಮ ಪಂಚಾಯಿತಿ ಮುಂದಾಗಿತ್ತು.ಆದರೆ ಈ ಜಾಗ ಖಾಸಗಿ ವ್ಯಕ್ತಿಯೊಬ್ಬರದ್ದಾಗಿರುವ ಕಾರಣ ಆಕ್ಷೇಪ ವ್ಯಕ್ತವಾಗಿತ್ತು ಎಂದು ಹೇಳಲಾಗಿದೆ. ಆದರೆ ಇದೀಗ ಮೋರಿ ಸಂಪೂರ್ಣ ಕುಸಿದು ಬಿದ್ದಿದ್ದು ಸದ್ಯ ತಾತ್ಕಾಲಿಕ ಸಂಪರ್ಕವೂ ಇಲ್ಲದಂತಾಗಿದೆ. ಇಲ್ಲಿ ಮೋರಿ ನಿರ್ಮಾಣಕ್ಕೆ ಖಾಸಗಿಯವರ ಆಕ್ಷೇಪ ಇರುವ ಕಾರಣ ಸಂಪರ್ಕಕ್ಕೆ ಮುಂದಿನ ಯೋಜನೆ ಏನು ಎಂಬುದು ಕಾದು ನೋಡಬೇಕಾಗಿದೆ.

ಸ್ಥಳಕ್ಕೆ ಪಂಚಾಯಿತಿ ಆಡಳಿತ ಮಂಡಳಿ ತೆರಳಿ ಪರಿಶೀಲನೆ ನಡೆಸಿದ್ದು ತಾತ್ಕಾಲಿಕ ಸಂಪರ್ಕ ಕಲ್ಪಿಸಿ ಕೊಡುವ ಭರವಸೆ ನೀಡಿದೆ.

Related posts

ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭ

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕಿಲ್ಲೂರಿನ ಶಾಲೆಯಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳ ಆಯೋಜನೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಲೈಸೆನ್ಸ್ ಇಲ್ಲದ ಗನ್ ನಿಂದ ಹಲ್ಲೆ :8 ಮಂದಿ ಆರೋಪಿಗಳ ವಿರುದ್ಧ ಅರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

Suddi Udaya

ತೆಂಕಕಾರಂದೂರು: ಕಾಪಿನಡ್ಕ ಗಾಂಧಿನಗರ ನಿವಾಸಿ ಸುಂದರ ದೇವಾಡಿಗ ನಿಧನ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!