September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಉತ್ಸವ ಸಮಿತಿ ರಚನೆ

ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ದೈವಗಳ ನೇಮೋತ್ಸವ 2026 ರ ಜನವರಿ 22 ರಿಂದ 24 ರ ವರೆಗೆ ವ್ಯವಸ್ಥಿತವಾಗಿ ನಡೆಸಲು ಆಡಳಿತ ಮಂಡಳಿಯ ನೇತೃತ್ವದಲ್ಲಿ ಉತ್ಸವ ಸಮಿತಿಯನ್ನು ರಚಿಸಲಾಯಿತು.


ಸಮಿತಿಯ ಅಧ್ಯಕ್ಷರಾಗಿ ಪದ್ಮಯ್ಯ ಗೌಡ ಬದ್ಯಡ್ಕ, ಕಾರ್ಯದರ್ಶಿಯಾಗಿ ಚಂದ್ರಶೇಖರ ಗೌಡ ನೆಕ್ಕರಾಜೆ ಮತ್ತು ಕೋಶಾಧಿಕಾರಿಯಾಗಿ ಶರತ್ ಮೂಡಾರು ಅವರನ್ನು ಆಯ್ಕೆ ಮಾಡಲಾಯಿತು. ನೂತನ ಉತ್ಸವ ಸಮಿತಿಗೆ ಅನೇಕ ಊರ ಪರವೂರ ಹಿರಿಯರನ್ನು ಗೌರವ ಸಲಹೆಗಾರರಾಗಿ ಮತ್ತು ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು.


ನೂತನ ಉತ್ಸವ ಸಮಿತಿಯು ದೇವಳದ ಅಧ್ಯಕ್ಷ ಕೆ. ಶ್ರೀಧರ್ ರಾವ್, ಕಾರ್ಯದರ್ಶಿ ಕುಸುಮಾಕರ ಕೊತ್ತೋಡಿ, ಕಾರ್ಯದರ್ಶಿ ನಿರಂಜನ್ ಬದಿಮಾರು ಹಾಗೂ ಇತರ ಸದಸ್ಯರ ಸಮ್ಮುಖದಲ್ಲಿ ನಡೆಸಲಾಯಿತು.

Related posts

ಕಳಿಯ ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್ ಬೆಳಗಾವಿಗೆ ವರ್ಗಾವಣೆ: ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಕುಂಞ ಕೆ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ “ಆಟಿದ ನೆಂಪು” ವಿಶೇಷ ಕಾರ್ಯಕ್ರಮ: ಮನಸೆಳೆದ 8 ವರ್ಷದ ಪೋರನ ಆಟಿ ಕಳೆಂಜ ವೇಷ

Suddi Udaya

ಕಡಿರುದ್ಯಾವರ: ಕೃಷಿ ತೋಟಕ್ಕೆ ಒಂಟಿ ಸಲಗ ದಾಳಿ

Suddi Udaya

ಹುಣ್ಸೆಕಟ್ಟೆ ಸ.ಕಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಕರಿಯಪ್ಪ ಎ.ಕೆ ರವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಅವರ ಚುನಾವಣಾ ಕಚೇರಿ ಉದ್ಘಾಟನೆ

Suddi Udaya

ಓಡಿಲ್ನಾಳ ಲಾಡಿ ದರ್ಖಾಸ್ ಎಂಬಲ್ಲಿ ಎರಡು ಮರಿ ಸಹಿತ ಕಂಡು ಬಂದ ಚಿರತೆ

Suddi Udaya
error: Content is protected !!