ಬೆಳ್ತಂಗಡಿ: ತಾಲೂಕು ಕೇಂದ್ರದಲ್ಲಿ ನಿರ್ಮಾಣವಾಗುತ್ತಿರುವ ಬಸ್ ನಿಲ್ದಾಣದ ಕಾಮಗಾರಿ ಸ್ಥಗಿತಗೊಂಡಿರುವ ಹಿನ್ನಲೆಯಲ್ಲಿ ಶಾಸಕ ಹರೀಶ್ ಪೂಂಜ ಅವರು ಅಧಿಕಾರಿಗಳ ಸಭೆ ನಡೆಸಿ ಕಾಮಗಾರಿ ಆರಂಭಿಸುವಂತೆ ಸೂಚನೆ ನೀಡಿದ್ದಾರೆ.

ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು , ಅರಣ್ಯ ಇಲಾಖೆ ಸೇರಿದಂತೆ ಇತರ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ
ಕಾಮಗಾರಿಯನ್ನು ಮುಕ್ತಾಯಗೊಳಿಸುವ ಸಂಬಂಧ ಇರುವ ಅಡಚಣೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿಗಳನ್ನು ಪಡೆದುಕೊಂಡರು. ಸಮಸ್ಯೆಗಳನ್ನು ಪರಿಹರಿಸಿ ಕೂಡಲೇ ಕಾಮಗಾರಿ ಆರಂಭಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿರುತ್ತಾರೆ. ಕಳೆದ ಆರು ತಿಂಗಳಿನಿಂದ ಸ್ಥಗಿತಗೊಂಡಿರುವ ಬಸ್ ನಿಲ್ದಾಣದ ಕಾಮಗಾರಿ ಇನ್ನಾದರೂ ಆರಂಭವಾಗುವುದೇ ಎಂದು ಕಾದು ನೋಡಬೇಕಾಗಿದೆ.











