22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಭಾರಿ ಮಳೆಗೆ ಕುಸಿದ ಮೋರಿ: ಗುಂಡ ದೈವಸ್ಥಾನದ ಸಂಪರ್ಕ ಕಡಿತ

ಮುಂಡಾಜೆ : ಇಲ್ಲಿಯ ಗುಂಡ ಶ್ರೀ ಮೂರ್ತಿಲ್ಲಾಯ ದೈವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮೋರಿ ಕುಸಿದು ಬಿದ್ದು ಸಂಪರ್ಕ ಕಡಿತಗೊಂಡ ಘಟನೆ ಅ.14ರಂದು ನಡೆದಿದೆ.


ಈ ಹಿಂದೆ ಭಾಗಶಃ ಕುಸಿತ ಕಂಡಿದ್ದ ಮೋರಿ ಮಂಗಳವಾರ ಸಂಜೆ ಸುರಿದ ಭಾರಿ ಮಳೆಗೆ ಸಂಪೂರ್ಣ ಕುಸಿದು ಬಿದ್ದಿದೆ.ಇದರಿಂದ ದೈವಸ್ಥಾನ ಸಹಿತ ಇಲ್ಲಿನ ನಾಲ್ಕಾರು ಮನೆಗಳಿಗೆ ಸಂಪರ್ಕ ಇಲ್ಲದಂತಾಗಿದೆ. ಸ್ಥಳೀಯರು ಪಕ್ಕದ ತೋಟಗಳಲ್ಲಿ ಸುತ್ತುಬಳಸಿನ ದಾರಿಯಲ್ಲಿ ನಡೆದುಕೊಂಡು ಹೋಗುವಂತಾಗಿದೆ.


ಈ ಹಿಂದೆ ಮಳೆಗಾಲದಲ್ಲಿ ಈ ಮೋರಿ ಕುಸಿತ ಕಾಣತೊಡಗಿತ್ತು. ಈ ಸಮಯ ಇದರ ದುರಸ್ತಿಗೆ ಮುಂಡಾಜೆ ಗ್ರಾಮ ಪಂಚಾಯಿತಿ ಮುಂದಾಗಿತ್ತು.ಆದರೆ ಈ ಜಾಗ ಖಾಸಗಿ ವ್ಯಕ್ತಿಯೊಬ್ಬರದ್ದಾಗಿರುವ ಕಾರಣ ಆಕ್ಷೇಪ ವ್ಯಕ್ತವಾಗಿತ್ತು ಎಂದು ಹೇಳಲಾಗಿದೆ. ಆದರೆ ಇದೀಗ ಮೋರಿ ಸಂಪೂರ್ಣ ಕುಸಿದು ಬಿದ್ದಿದ್ದು ಸದ್ಯ ತಾತ್ಕಾಲಿಕ ಸಂಪರ್ಕವೂ ಇಲ್ಲದಂತಾಗಿದೆ. ಇಲ್ಲಿ ಮೋರಿ ನಿರ್ಮಾಣಕ್ಕೆ ಖಾಸಗಿಯವರ ಆಕ್ಷೇಪ ಇರುವ ಕಾರಣ ಸಂಪರ್ಕಕ್ಕೆ ಮುಂದಿನ ಯೋಜನೆ ಏನು ಎಂಬುದು ಕಾದು ನೋಡಬೇಕಾಗಿದೆ.

ಸ್ಥಳಕ್ಕೆ ಪಂಚಾಯಿತಿ ಆಡಳಿತ ಮಂಡಳಿ ತೆರಳಿ ಪರಿಶೀಲನೆ ನಡೆಸಿದ್ದು ತಾತ್ಕಾಲಿಕ ಸಂಪರ್ಕ ಕಲ್ಪಿಸಿ ಕೊಡುವ ಭರವಸೆ ನೀಡಿದೆ.

Related posts

ಸೆ.7-9: ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದಿಂದ ಬೈಕ್ ಜಾಥದ ಮೂಲಕ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ಜಿಲ್ಲಾ ಮಟ್ಟದ ಗಾಂಧಿಗ್ರಾಮ ಪುರಸ್ಕಾರಕ್ಕೆ ಪಡಂಗಡಿ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಕಾಜಿಮುಗೇರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಸೀತರಾಮ ಹೆಬ್ಬಾರ್ ವಿಧಿವಶ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

Suddi Udaya
error: Content is protected !!