September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಭಾರಿ ಮಳೆಗೆ ಕುಸಿದ ಮೋರಿ: ಗುಂಡ ದೈವಸ್ಥಾನದ ಸಂಪರ್ಕ ಕಡಿತ

ಮುಂಡಾಜೆ : ಇಲ್ಲಿಯ ಗುಂಡ ಶ್ರೀ ಮೂರ್ತಿಲ್ಲಾಯ ದೈವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮೋರಿ ಕುಸಿದು ಬಿದ್ದು ಸಂಪರ್ಕ ಕಡಿತಗೊಂಡ ಘಟನೆ ಅ.14ರಂದು ನಡೆದಿದೆ.


ಈ ಹಿಂದೆ ಭಾಗಶಃ ಕುಸಿತ ಕಂಡಿದ್ದ ಮೋರಿ ಮಂಗಳವಾರ ಸಂಜೆ ಸುರಿದ ಭಾರಿ ಮಳೆಗೆ ಸಂಪೂರ್ಣ ಕುಸಿದು ಬಿದ್ದಿದೆ.ಇದರಿಂದ ದೈವಸ್ಥಾನ ಸಹಿತ ಇಲ್ಲಿನ ನಾಲ್ಕಾರು ಮನೆಗಳಿಗೆ ಸಂಪರ್ಕ ಇಲ್ಲದಂತಾಗಿದೆ. ಸ್ಥಳೀಯರು ಪಕ್ಕದ ತೋಟಗಳಲ್ಲಿ ಸುತ್ತುಬಳಸಿನ ದಾರಿಯಲ್ಲಿ ನಡೆದುಕೊಂಡು ಹೋಗುವಂತಾಗಿದೆ.


ಈ ಹಿಂದೆ ಮಳೆಗಾಲದಲ್ಲಿ ಈ ಮೋರಿ ಕುಸಿತ ಕಾಣತೊಡಗಿತ್ತು. ಈ ಸಮಯ ಇದರ ದುರಸ್ತಿಗೆ ಮುಂಡಾಜೆ ಗ್ರಾಮ ಪಂಚಾಯಿತಿ ಮುಂದಾಗಿತ್ತು.ಆದರೆ ಈ ಜಾಗ ಖಾಸಗಿ ವ್ಯಕ್ತಿಯೊಬ್ಬರದ್ದಾಗಿರುವ ಕಾರಣ ಆಕ್ಷೇಪ ವ್ಯಕ್ತವಾಗಿತ್ತು ಎಂದು ಹೇಳಲಾಗಿದೆ. ಆದರೆ ಇದೀಗ ಮೋರಿ ಸಂಪೂರ್ಣ ಕುಸಿದು ಬಿದ್ದಿದ್ದು ಸದ್ಯ ತಾತ್ಕಾಲಿಕ ಸಂಪರ್ಕವೂ ಇಲ್ಲದಂತಾಗಿದೆ. ಇಲ್ಲಿ ಮೋರಿ ನಿರ್ಮಾಣಕ್ಕೆ ಖಾಸಗಿಯವರ ಆಕ್ಷೇಪ ಇರುವ ಕಾರಣ ಸಂಪರ್ಕಕ್ಕೆ ಮುಂದಿನ ಯೋಜನೆ ಏನು ಎಂಬುದು ಕಾದು ನೋಡಬೇಕಾಗಿದೆ.

ಸ್ಥಳಕ್ಕೆ ಪಂಚಾಯಿತಿ ಆಡಳಿತ ಮಂಡಳಿ ತೆರಳಿ ಪರಿಶೀಲನೆ ನಡೆಸಿದ್ದು ತಾತ್ಕಾಲಿಕ ಸಂಪರ್ಕ ಕಲ್ಪಿಸಿ ಕೊಡುವ ಭರವಸೆ ನೀಡಿದೆ.

Related posts

13 ವರ್ಷಗಳ ಹಿಂದೆ ಬಂಟ್ವಾಳದ ಕು! ಹೇಮಾವತಿ ನಾಪತ್ತೆ ಆಕೆಯ ಸಹೋದರ ನಿಂದ ಪುಂಜಾಲಕಟ್ಟೆ‌ಠಾಣೆಗೆ ನೀಡಿದ ದೂರನ್ನು ಸ್ವೀಕರಿಸಿದ ಎಸ್ ಐ ಟಿ

Suddi Udaya

ಸೆ.22 -ಅ.2 : ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದಲ್ಲಿ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಇಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಹೊಸಂಗಡಿ: ಹಿಂದೂ ರುದ್ರ ಭೂಮಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನ

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ-2026ರ ಸಮಾರೋಪ

Suddi Udaya

ಜಿಲ್ಲಾ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿಗೆ ಹಲವಾರು ಪ್ರಶಸ್ತಿ

Suddi Udaya
error: Content is protected !!