24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಭಾರಿ ಮಳೆಗೆ ಕುಸಿದ ಮೋರಿ: ಗುಂಡ ದೈವಸ್ಥಾನದ ಸಂಪರ್ಕ ಕಡಿತ

ಮುಂಡಾಜೆ : ಇಲ್ಲಿಯ ಗುಂಡ ಶ್ರೀ ಮೂರ್ತಿಲ್ಲಾಯ ದೈವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮೋರಿ ಕುಸಿದು ಬಿದ್ದು ಸಂಪರ್ಕ ಕಡಿತಗೊಂಡ ಘಟನೆ ಅ.14ರಂದು ನಡೆದಿದೆ.


ಈ ಹಿಂದೆ ಭಾಗಶಃ ಕುಸಿತ ಕಂಡಿದ್ದ ಮೋರಿ ಮಂಗಳವಾರ ಸಂಜೆ ಸುರಿದ ಭಾರಿ ಮಳೆಗೆ ಸಂಪೂರ್ಣ ಕುಸಿದು ಬಿದ್ದಿದೆ.ಇದರಿಂದ ದೈವಸ್ಥಾನ ಸಹಿತ ಇಲ್ಲಿನ ನಾಲ್ಕಾರು ಮನೆಗಳಿಗೆ ಸಂಪರ್ಕ ಇಲ್ಲದಂತಾಗಿದೆ. ಸ್ಥಳೀಯರು ಪಕ್ಕದ ತೋಟಗಳಲ್ಲಿ ಸುತ್ತುಬಳಸಿನ ದಾರಿಯಲ್ಲಿ ನಡೆದುಕೊಂಡು ಹೋಗುವಂತಾಗಿದೆ.


ಈ ಹಿಂದೆ ಮಳೆಗಾಲದಲ್ಲಿ ಈ ಮೋರಿ ಕುಸಿತ ಕಾಣತೊಡಗಿತ್ತು. ಈ ಸಮಯ ಇದರ ದುರಸ್ತಿಗೆ ಮುಂಡಾಜೆ ಗ್ರಾಮ ಪಂಚಾಯಿತಿ ಮುಂದಾಗಿತ್ತು.ಆದರೆ ಈ ಜಾಗ ಖಾಸಗಿ ವ್ಯಕ್ತಿಯೊಬ್ಬರದ್ದಾಗಿರುವ ಕಾರಣ ಆಕ್ಷೇಪ ವ್ಯಕ್ತವಾಗಿತ್ತು ಎಂದು ಹೇಳಲಾಗಿದೆ. ಆದರೆ ಇದೀಗ ಮೋರಿ ಸಂಪೂರ್ಣ ಕುಸಿದು ಬಿದ್ದಿದ್ದು ಸದ್ಯ ತಾತ್ಕಾಲಿಕ ಸಂಪರ್ಕವೂ ಇಲ್ಲದಂತಾಗಿದೆ. ಇಲ್ಲಿ ಮೋರಿ ನಿರ್ಮಾಣಕ್ಕೆ ಖಾಸಗಿಯವರ ಆಕ್ಷೇಪ ಇರುವ ಕಾರಣ ಸಂಪರ್ಕಕ್ಕೆ ಮುಂದಿನ ಯೋಜನೆ ಏನು ಎಂಬುದು ಕಾದು ನೋಡಬೇಕಾಗಿದೆ.

ಸ್ಥಳಕ್ಕೆ ಪಂಚಾಯಿತಿ ಆಡಳಿತ ಮಂಡಳಿ ತೆರಳಿ ಪರಿಶೀಲನೆ ನಡೆಸಿದ್ದು ತಾತ್ಕಾಲಿಕ ಸಂಪರ್ಕ ಕಲ್ಪಿಸಿ ಕೊಡುವ ಭರವಸೆ ನೀಡಿದೆ.

Related posts

ಬೆಳ್ತಂಗಡಿ: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಮಚ್ಚಿನ: ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ : ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya

ನಿರ್ಮಾಣ ಹಂತದಲ್ಲಿರುವ ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿ ಪ್ರತ್ಯಕ್ಷ: ಮೂರ್ತಿಗೆ ಹೂ ಹಾಕಿ, ಪ್ರಾರ್ಥಿಸಿ ಹೋದ ಅನಾಮಿಕ,

Suddi Udaya

ಮಲವಂತಿಗೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya

ಮಿತ್ತಬಾಗಿಲು ಸುಜ್ಞಾನ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya
error: Content is protected !!