March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

2 ಲಕ್ಷ ಮೌಲ್ಯ ದ ಚಿನ್ನದ ಬ್ರೇಸ್ ಲೆಟ್ ಮರಳಿಸಿ‌ ಪ್ರಾಮಾಣಿಕತೆ ಮೆರೆದ ಬದ್ಯಾರಿನ ಝೈನುದ್ದೀನ್

ಬೆಳ್ತಂಗಡಿ: ತನಗರಿವಿಲ್ಲದ ಕುವೆಟ್ಟು ಗ್ರಾಮದ ಶಕ್ತಿನಗರ ಸರ್ಕಲ್ ನಲ್ಲಿ ಎರಡು ಲಕ್ಷ ಮೌಲ್ಯದ ಚಿನ್ನದ ಬ್ರೇಸ್ ಲೆಟ್ ಕಳೆದುಕೊಂಡಿದ್ದ ದಂಪತಿಗೆ, ಅದು ಬಿದ್ದು ಸಿಕ್ಕಿದ್ದ ಯುವಕ ಮರಳಿಸಿ ಪ್ರಾಮಾಣಿಕ ಮೆರೆದಿದ್ದಾರೆ.

ಕುವೆಟ್ಟು ಗ್ರಾಮದ ಬದ್ಯಾರ್ ನಿವಾಸಿ ಸಲೀಂ ಎಂಬವರ ಪುತ್ರ ಝೈನುದ್ದೀನ್ ಅವರೇ ಮಾದರಿ ವ್ಯಕ್ತಿತ್ವ ತೋರಿದ ಯುವಕ.
ರಿಕ್ಷಾ ಚಾಲಕರಾಗಿರುವ ಅವರಿಗೆ ಈ ಆಭರಣ ಸಿಕ್ಕಿತ್ತು. ಇದಾದ ಕೆಲವೇ ಹೊತ್ತಿನಲ್ಲಿ ಸ್ಥಳೀಯವಾಗಿ ಹಲವರ ಮೊಬೈಲ್ ಸ್ಟೇಟಸ್ ನಲ್ಲಿ ಈ ಚಿನ್ನ ಕಳೆದುಹೋಗಿರುವ ಬಗ್ಗೆ ಸಂದೇಶಗಳು ಹರಿದಾಡುತ್ತಿತ್ತು. ಅದನ್ನು ಗಮನಿಸಿದ ತಕ್ಷಣ ಆ ನಂಬರ್ ಗೆ ಕರೆ ಮಾಡಿದಾಗ ಅದು ಸಿದ್ದೀಕ್ ಎಂಬವರ ಪತ್ನಿ ಫರ್ಝಾನ ಅವರು ಬದ್ಯಾರ್ ನ ತಾಯಿ ಮನೆಯಿಂದ ಪತಿಯ ಮನೆ ಮಲೆಬೆಟ್ಟು ಇಲ್ಲಿಗೆ ಹೋಗುವ ವೇಳೆ ಕಳೆದುಕೊಂಡಿದ್ದೆಂದು ಖಚಿತಪಡಿಸಿ ಅವರಿಗೆ ಈ‌ ಆಭರಣವನ್ನು ಹಸ್ತಾಂತರಿಸಿದರು.

ಝೈನುದ್ದೀನ್ ಅವರ ಈ ಪ್ರಾಮಣಿಕತೆಯನ್ನು ಮೆಚ್ಚಿ ಸಿದ್ದೀಕ್ ಅವರು ಝೈನುದ್ದೀನ್ ಅವರನ್ನು ಶಾಲು ಹೊದಿಸಿ ಸನ್ಮಾನಿಸಿ, ನಗದು ಪುರಸ್ಕಾರ ನೀಡಿ ಗೌರವಿಸಿದರು.
ಈ ಸಂದರ್ಭ ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮಹಮ್ಮದ್ ಹನೀಫ್ ಉಜಿರೆ, ನಗರ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಮೊಹಮ್ಮದ್ ಶಾಫಿ ಕಾಶಿಪಟ್ಣ ಉಪಸ್ಥಿತರಿದ್ದರು.

Related posts

ಭಾರೀ ಮಳೆ ಹಿನ್ನೆಲೆ: ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜೂ16)ರಜೆ ಘೋಷಣೆ

Suddi Udaya

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ರೌಫ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಮರೋಡಿ: ವಿದ್ಯುತ್ ಪರಿವರ್ತಕದಿಂದ ಬೆಂಕಿ ಅವಘಡ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ 6ನೇ ವರ್ಷದ ದೀಪಾವಳಿ ದೋಸೆ ಹಬ್ಬ ಹಾಗೂ ನಮೋ ಮ್ಯಾರಥಾನ್ ಪೂರ್ವಭಾವಿ ಸಭೆ

Suddi Udaya

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ -ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಹಾಗೂ ತೃತೀಯ ಸ್ಥಾನ

Suddi Udaya

ತೆಕ್ಕಾರು ಗ್ರಾ.ಪಂ. ನಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!